ಸತ್ಯ ಎಂದರೆ ಗಡಿಯಾಚೆಯ ಸುಳ್ಳು

‘ಬಿಡಿ ಬಿಡಿ, ಎಲ್ಲ ಬರಿ ಉಡಾಫೆ’ ಎಂದೆ,
ನಕ್ಕರು.

‘ನೋಡು ಮರಿ, ಹತ್ತಾರು ಬಾರಿ
ಹೋಗಿ ಬಂದಿರುವ ದಾರಿ,
ಹೆಜ್ಜೆ ಗುರುತಿರುವ ಕಾಡು
ಬೇಕಾದರೆ ಬಂಡವಾಳ ಹೂಡು.
ಆದರೆ ಒಂದು ವಿಷಯ
ಊರಿರುವದೇ ಆಚೆ
ಹೋಗಿ ಸೇರಲೇ ಬೇಕು,
ದಾರಿ ಸಾಗಲೇ ಬೇಕು,
ತಕ್ಕ ಆಸಕ್ತಿಗೆ ಕಾಯಲೇಬೇಕು’
ಎಂದರು.

‘ಹೇಳಿಬಿಡಿ’ ಎಂದೆ
ಹಾಳಾಗಲಿ
ಕೇಳಿ ಕಳಿಸಿಬಿಡೋಣ
ಪ್ರಾರಬ್ಧ ಅಂತ.
ಅಸಹನೆ ಅರ್ಥವಾಗಿ ನಕ್ಕರು.

‘ಗಡಿಯೊಳಗೇ ಇರುವವನಿಗೆ’ ಗೋಡೆ ಅಡ್ಡವಾಗಿ
ಥಿಯೇಟರಿನೊಳಗಿನ ಚಿತ್ರದ ಸತ್ಯ ಇದೆಲ್ಲ.
ಮೈ ಅಲುಗದಂತೆ ಕುರ್ಚಿಯಲ್ಲಿಯೇ ಇದ್ದು
ಮನಸ್ಸು ಮಾತ್ರ ಅದರಿಂದ ಎದ್ದು
ಶಕುಂತಳೆ ರೇಖಾಳನ್ನು ದುಶ್ಯಂತ ಅಮಿತಾಭನಾಗಿ ತಬ್ಬುವ,
ಯಾರ ಒಡಲಲ್ಲೋ ಇಳಿದು
ತನ್ನಾಸೆಗಳನ್ನು ಆಡಿ ಕಳೆದು
ಕಡೆಗೆ ಕೊಳಬಿಟ್ಟು ಬರುವ ಅನುಭವ-
ಹೇಳು ನಾವು ಯಾರು?’ ಎಂದರು.
‘ಇದೆಲ್ಲ ಕಲೆ ನಾಟಕ ಚಿತ್ರದ ವಿಷಯ
ಉಳಿದದ್ದು ಹೇಳಿ ಈ ಗಟ್ಟಿಲೋಕ ಸುಳ್ಳಾ?’ ಎಂದೆ.

‘ಇಲ್ಲ.
ಬಾಳುತ್ತಿರುವ ಸುಳ್ಳು
ಸಾಯುವ ತನಕದ ಸತ್ಯ,
ಕನಸಿನಲ್ಲಿ ಅಸಂಬದ್ಧವೆಲ್ಲ ನಡೆಯೋಲ್ಲವಾ?’ ಎಂದರು.
ಕುತೂಹಲ ಚಿಗುರಿ
‘ಹೌದು ಹೌದು ಹೇಳಿ’ ಎಂದೆ
‘ಅಸಂಬದ್ಧ ಆಡಿಲ್ಲವಾ
ಅಸಂಬದ್ಧ ಕೇಳಿಲ್ಲವಾ?
ಕಂಡಿದ್ದ ಮೈಗೆ
ಕಾಣದ ಮುಖ ಹುಟ್ಟಿ
ಕೈಯನ್ನೇ ರೆಕ್ಕೆ ಹಾಗೆ ಬೀಸಿ ಗಾಳಿಯಲ್ಲಿ ಈಜಲ್ಲವಾ?
ನದಿತಳದಲ್ಲಿ ಮನೆ,
ಜಲಕನ್ಯೆಯ ಜೊತ ಭೋಗ,
ಅರ್ಧಗಂಟೆಯಲ್ಲೇ ಐವತ್ತು ವರುಷ ಬಾಳಿಲ್ಲವಾ?
ಬಗೆ ಬಗೆ ಸತ್ಯ,
ಎಲ್ಲಕ್ಕೂ ಅದರದ್ದೇ ಗಣಿತ ಕುಣಿತ
ಯಾರು ಪ್ರಶ್ನಿಸಿದ್ದರು ಅವನ್ನು ಗಡಿಯೊಳಗೆ
ಯಾವತ್ತು?’ ಎಂದರು.

ಎಲಾ! ಎನಿಸಿತು.
ನಿಜವೆನಿಸಿದರೂ ಒಪ್ಪಲು ಬಾರದೆ ಕೇಳಿದೆ
‘ಇದೆಲ್ಲ ಕನಸು ಕುಡಿಯುವ ಮನಸಿನ ಅಮಲು ಅಲ್ಲವೆ?
ಹುಲ್ಲಿನ ಮಾತು ಹೇಳಿ
ಕಂಪಿಸಲೂ ಬಾರದ ಕಲ್ಲಿನ ಮಾತು ಹೇಳಿ
ಕುಡಿಯಲು ಬಾರದ ಬೆಟ್ಟ ನದಿ ಜಡಗಳ ಸತ್ಯಕ್ಕೆ
ಎಲ್ಲಿದೆ ದಾಳಿ ?’ ಎಂದು
ಕಡೆಗೊಮ್ಮೆ ಹೆಡತಲೆಗೇ ಕೊಡಲಿ ಬೀಸಿದೆ!
‘ಹೌದಾ’ ಎಂದವರೇ ನಗುತ್ತ ಕೇಳಿದರು;
‘ಭೂಮಿಯ ಸೆಳೆತ ಮೀರಿದ ಮೇಲೆ
ಮಣಕ್ಕೆ ಎಷ್ಟು ತೂಕ, ತೃಣಕ್ಕೆ ಎಷ್ಟು ತೂಕ?
ನದಿ ಅಲ್ಲಿ ಹರಿಯುತ್ತದೆಯೆ?
ಕಾಮನ ಬಿಲ್ಲಿನ ಬಣ್ಣಗಳಲ್ಲಿ
ಯಾವುದು ಸುಳ್ಳು, ಯಾವುದು ಸಾಚಾ,
ಸತ್ಯಕ್ಕೆ ತಡೆಯುತ್ತದೆಯೆ?
ಬೆಳಕಿನ ವೇಗದಲ್ಲಿ ಎಸೆದರು ಎನ್ನು
ವಸ್ತು ಉಳಿಯುತ್ತದೆಯೆ?
ಹೇಳು ಹೇಳು,
ಸತ್ಯ ಎಂದರೆ ಯಾವುದು ಹೇಳೋ’ ಎಂದರು.

ಕಂಗಾಲಾದೆ
ಕುತ್ತಿಗೆಗೆ ಗುರಿಯಿಟ್ಟಂತೆ
ಹಿಂದಕ್ಕೆ ಬೀಸಿ ಬರುತ್ತಿರುವುದು
ನಾನೇ ಬೀಸಿದ ಕೂಡಲಿ ಎನಿಸಿತು.
ಗುರಿಗೆ ಸರಿಯಾಗಿ ತಲೆಕೊಡುತ್ತ ಹೇಳಿದೆ:
‘ಹೌದು ಹೌದು,
ಗಡಿ ದಾಟಿದ ಮೇಲೆ ಎಲ್ಲ ಬರಿ ಜಳ್ಳು,
ನಮ್ಮ ಸತ್ಯ ಕೂಡ ಗಡಿಯಾಚೆಗೆ ಸುಳ್ಳು.’
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಾನ ಕಳೆದೆ
Next post ಕವಿದ ಮೋಡ ಕಪ್ಪಾದರೇನು

ಸಣ್ಣ ಕತೆ

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

cheap jordans|wholesale air max|wholesale jordans|wholesale jewelry|wholesale jerseys