ತ್ರಿಮೂರ್ತಿ

ಬೆಳಿಗ್ಗೆ ಪ್ರಗತಿಶೀಲರ ಸಭೆಯಲ್ಲಿ ಎಚ್ಚರಿಸಿದರು ಕವಿ :
“ಬಾನು ಭೂಮಿ ಒಂದೆ ಸಮ, ಹಳ್ಳ ಕಡಲು ಒಂದೆ ಸಮ
ಒಂದೆ ಸಮ ಒಂದೆ ಸಮ, ಕೊರಡು ಮರ ಒಂದೆ ಸಮ”

ಗುಡುಗಿದರು ಕವಿ ಮಧ್ಯಾಹ್ನ ಮೈಸೂರಿನ ಕುಕ್ಕೂಟ ಸಭೆಯಲ್ಲಿ :
“ವೈದಿಕ ಸಂಸ್ಕೃತಿ ಹುಸಿ,
ತಟ್ಟಿ ಅದರ ಬಿಸಿ
ಕಮರಿ ಹೋಗುತ್ತಿವೆ ನಾಡಿನ ಎಲ್ಲ ಮಾವು ನೇರಿಳೆ ಸಸಿ
ದೇಶದ ಉಜ್ವಲ ಮುಖದಲ್ಲಿ ಇದು ಮಹಾಮಸಿ”

ತೇಲಿತು ಕವಿವಾಣಿ ರಾತ್ರಿ ಕಮರ್ಷಿಯಲ್ ಬ್ರಾಡ್‌ಕಾಸ್ಟಿಂಗ್‌ನಲ್ಲಿ:
“ಪರಮಹಂಸರು ತಮ್ಮ ಬಿಲ್ಲಿನಲಿ ತೊಟ್ಟಂಥ ಬಾಣ ನೀನು
ಹೇ ವಿವೇಕಾನಂದ ನೀ ನಮ್ಮ ಸಂಸ್ಕೃತಿಯ ಕಾಮಧೇನು”

ಕವಿಯ ದಿಟ್ಟತನಕ್ಕೆ ಬೆಚ್ಚಿತು ಅಮಾವಾಸ್ಯೆಯ ಕಾರಿರುಳು
ಮಚ್ಚಿಗೆ ಸೂಸಿ ಎದ್ದಿತು ಕಾಂಪೌಂಡಿನಿಂದ ನಾಯಿ ಬೊಗಳು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನುತಿಸುವೆನು ಬಸವ
Next post ಹರಿವ ತೊರೆಯ ಅಲೆ

ಸಣ್ಣ ಕತೆ

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

cheap jordans|wholesale air max|wholesale jordans|wholesale jewelry|wholesale jerseys