ತಿರುಪ್ಪಾವೈ – ಮುನ್ನುಡಿ

ತಿರುಪ್ಪಾವೈ – ಮುನ್ನುಡಿ

ಧರ್ಮಭೂಮಿ ಎನಿಸಿಕೊಂಡಿರುವ ಭಾರತದ ಇತಿಹಾಸದುದ್ದಕ್ಕೂ ಸಾಧುಸಂತರು, ಭಕ್ತಶ್ರೇಷ್ಠರು, ವೇದಾಂತಿಗಳು, ಮಹಾತ್ಮರೂ ಜನ್ಮತಾಳಿ ತಮ್ಮ ತತ್ವಜ್ಞಾನವನ್ನು ಜನತೆಗೆ ನೀಡಿದ್ದಾರೆ. ಅಂತಹ ಭಕ್ತರಲ್ಲಿ ತಮಿಳುನಾಡಿನ ಭಕ್ತಪರಂಪರೆಯಲ್ಲಿ ಅಗ್ರಗಣ್ಯರಾದ ಹನ್ನೆರಡು ಜನ ಆಳ್ವಾರುಗಳಲ್ಲಿ ಒಬ್ಬಳು ಆಂಡಾಳ್. “ಆಂಡಾಳ್” ಎಂದರೆ ಆಳಿದವಳು ಎಂಬ ಅರ್ಥ ಬರುತ್ತದೆ. ತನ್ನ ಅನನ್ಯ ಭಕ್ತಿಯಿಂದ ಪರಮಾತ್ಮನ ಮನವನ್ನು ಗೆದ್ದು ಆಳಿದವಳು “ಆಂಡಾಳ್”. ಉತ್ತರ ಭಾರತದಲ್ಲಿ ಜನಿಸಿ ಶ್ರೀಕೃಷ್ಣನಿಗೆ ಒಲಿದ ಭಕ್ತ ಮೀರಾಳಂತೆ ದಕ್ಷಿಣ ಭಾರತದಲ್ಲಿ ಶ್ರೀಕೃಷ್ಣನನ್ನೇ ಪತಿಯೆಂದು ಪರಿಗಣಿಸಿದ ಭಕ್ತೆ “ಆಂಡಾಳ್”.

ಆಂಡಾಳ್ ಸೀತೆಯಂತೆ ಭೂಮಿಯಲ್ಲಿ ದೊರೆತ ಅಯೋನಿಜೆ, ಆಂಡಾಳ್ ದೇವಿಯ ಕಥೆ ಸುಂದರವಾದ ಪೌರಣಿಕ ಕಥೆಯಂತಿದ್ದರೂ, ಇದು ಸತ್ಯ ಘಟನೆ. ಇದನ್ನು ಹಲವಾರು ವಿದ್ವಾಂಸರೂ, ಸಂಶೋಧಕರೂ ಆಳವಾಗಿ ಅಭ್ಯಾಸ ಮಾಡಿ ಹಲವಾರು ವಿಷಯಗಳನ್ನು ಬೆಳಕಿಗೆ ತಂದಿದ್ದಾರೆ.

ಆಂಡಾಳ್ ಅವತರಿಸಿದ ಕಾಲ ಕ್ರಿ.ಶ. ೭-೮ ಶತಮಾನಗಳ ಮಧ್ಯಭಾಗವೆಂದೂ, ತಮಿಳುನಾಡಿನ ಪಾಂಡ್ಯ ದೇಶದ ರಾಜ ವಲ್ಲಭದೇವನ ಕಾಲವೆಂದೂ ವಿದ್ವಾಂಸರ ಅಭಿಪ್ರಾಯ. ಆದರೆ ಉಪನ್ಯಾಸಕರನೇಕರ ಅಭಿಪ್ರಾಯ ಆಂಡಾಳ್ ಜನನ ಕಲಿಯುಗ ಆರಂಭವಾಗಿ ಇನ್ನೂರು ವರ್ಷಗಳಿಗೆ ಸರಿಯಾಗಿ ಎಂದು. ಏನೇ ಇದ್ದರೂ ಆಂಡಾಳ್ ಕಾಲ್ಪನಿಕ ವ್ಯಕ್ತಿಯಲ್ಲ. ಆಂಡಾಳ್ ದೊರೆತ ತುಳಸೀವನ, ಆಂಡಾಳ್ ದೇವಿಯ ಸಾಕು ತಂದೆ ಪೆರಿಯಾಳವಾರ್ ಸನ್ನಿಧಿ. ಅವರಿಬ್ಬರೂ ಪೂಜಿಸಿದ ವಟಪತ್ರಶಾಯಿ ದೇವಾಲಯ, ಇವೆಲ್ಲವೂ ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ಶ್ರೀವಿಲ್ಲಿಪುತ್ತೂರಿನಲ್ಲಿ ಈಗಲೂ ಇವೆ. ಆಂಡಾಳ್ ದೇವಿಯ ಅನನ್ಯ ಭಕ್ತಿಗೆ ಒಲಿದು ಆಕೆಯ ಕೈಹಿಡಿದ ಶ್ರೀರಂಗನಾಥನ ದೇವಾಲಯ ಈಗಿನ ತಿರುಚ್ಚಿನಾಪಳ್ಳಿ ಜಿಲ್ಲೆಯ ಶ್ರೀರಂಗ ಕ್ಷೇತ್ರಗಳನ್ನು ಸಂದರ್ಶಿಸಿ ಭಗವಂತನನ್ನು ಹಾಡಿ ಸ್ತುತಿಸಿದಳೆಂದು ತಿಳಿದುಬರುತ್ತದೆ. ಅವುಗಳಲ್ಲಿ ತಿರುವರಂಗಂ ಪೆರಿಯಕೋಯಿಲ್ (ಶ್ರೀರಂಗಂ), ತಿರುಕ್ಕಣ್ಣಪುರಂ, ತಿರುಮಾಲಿರಂ ಚೋಮಲೈ (ಅಯ್ಯಗರ್ ಕೋಯಿಲ್‌), ತಿರುವೇಂಗಡಂ (ತಿರುಪತಿ) ಮುಂತಾದವು ಮುಖ್ಯವಾದವು.

ಆಂಡಾಳ್ ದೇವಿಗೆ ಹಲವಾರು ಹೆಸರುಗಳಿವೆ. ಭೂಮಿಯಲ್ಲಿ ದೊರೆತವಳಾದ್ದರಿಂದ ‘ಗೋದಾದೇವಿ’ ಎಂದೂ ಮಹಾಲಕ್ಷ್ಮಿಯ ಅವತಾರವಾದ್ದರಿಂದ ‘ನೀಳಾದೇವಿ’ ಎಂದೂ, ತಾನೂ ಮೊದಲು ಹೂ ಮುಡಿದು ಆ ಹೂಗಳನ್ನೇ ಭಕ್ತಿಭಾವದಿಂದ ಭಗವಂತನಿಗೆ ಅರ್ಪಿಸಿದುದರಿಂದ “ಶೂಡಿಕ್ಕುಡುತ್ತ ನಾಚ್ಚಿಯಾರ್” ಎಂದೂ ಹೆಸರುಗಳುಂಟು.

ಗೋಕುಲದ ಗೋಪ ಕನೈಯರು ಕಾತ್ಯಾಯಿನೀ ವ್ರತವನ್ನು ಆಚರಿಸಿ ತಮ್ಮ ಪ್ರಾಣೇಶ್ವರನನ್ನು ಪಡೆದಂತೆ ಆಂಡಾಳ್ ತನ್ನ ಗೆಳತಿಯರೊಂದಿಗೆ ಪ್ರಾಣೇಶ್ವರನ ಪ್ರಾಪ್ತಿಗಾಗಿ ಆಚರಿಸಿದ ವ್ರತವೇ “ತಿರುಪ್ಪಾವೈ”. ಮೂವತ್ತು ಹಾಡುಗಳುಳ್ಳ ಈ ಸುಂದರ ಗ್ರಂಥವನ್ನು ಆಂಡಾಳ್ ತಾನೇ ರಚಿಸಿ ಹಾಡಿದ್ದಾಳೆ. ‘ತಿರು’ ಎಂದರೆ ಒಳ್ಳೆಯ, ‘ಪಾವೈ’ ಎಂದರೆ ವ್ರತ. ಈ ವ್ರತದ ಫಲ ಕಾಲಕಾಲಕ್ಕೆ ವೃಷ್ಟಿ, ಕನ್ಯೆಯರಿಗೆ ಸೌಮಾಂಗಲ್ಯ ಪ್ರಾಪ್ತಿ. ಅವರವರಿಗೆ ತಮ್ಮ ತಮ್ಮ ಇಷ್ಟ ಕಾರ್ಯ ಸಿದ್ಧಿ ಮತ್ತು ಮೋಕ್ಷ ಸಾಧನೆಗೆ ಮಾರ್ಗ ಈ “ತಿರುಪ್ಪಾವೈ”.

ಈ ತಿರುಪ್ಪಾವೈಯನ್ನು ಶ್ರೀ ವೈಷ್ಣವ ದೇವಾಲಯಗಳಲ್ಲಿ ಧನುರ್ಮಾಸ (ಮಾರ್ಗಶಿರ)ದ ಮೂವತ್ತು ದಿನಗಳೂ ಉಪನ್ಯಾಸ ಮಾಡುತ್ತಾರೆ. ಈಗಾಗಲೇ ಎಷ್ಟೋ ಮಹಾನುಭಾವರು ಈ ಗ್ರಂಥವನ್ನು ಕನ್ನಡ, ತೆಲುಗು ಮತ್ತಿತರ ಭಾಷೆಗಳಿಗೆ ಭಾಷಾಂತರಿಸಿದ್ದಾರೆ. ಡಾ|| ಎಂ. ಎಲ್. ವಸಂತಕುಮಾರಿಯವರು ಹಾಡಿರುವ ತಿರುಪ್ಪಾವೈ ಕ್ಯಾಸೆಟ್ಟುಗಳು ಕೂಡಾ ಬಿಡುಗಡೆಯಾಗಿವೆ. ಈ ತಿರುಪ್ಪಾವೈಯನ್ನು ಪಾರಾಯಣ ಮಾಡಿದವರಿಗೆ ಸಕಲ ಇಷ್ಟಾರ್ಥ ನೆರವೇರುತ್ತದೆಂಬ ಹಿರಿಯ ನುಡಿಯಂತೆ ನಾವೂ ಭಕ್ತಿಭಾವದಿಂದ ಈ ಗ್ರಂಥವನ್ನು ಓದೋಣ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾಯಿ
Next post ಎಲ್ಲಿ ಹೋದಳು ನಮ್ಮ ಅಡಗೂಲಜ್ಜಿ?

ಸಣ್ಣ ಕತೆ

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

cheap jordans|wholesale air max|wholesale jordans|wholesale jewelry|wholesale jerseys