ಭಾರತೀಯ ಯುವ ವಿಜ್ಞಾನಿಯ ಶೋಧ – ಪ್ಲಾಸ್ಟಿಕ್ ಬಗ್

ಭಾರತೀಯ ಯುವ ವಿಜ್ಞಾನಿಯ ಶೋಧ – ಪ್ಲಾಸ್ಟಿಕ್ ಬಗ್

ಪರಿಸರಕ್ಕೆ ಕಂಟಕ ಪ್ರಾಯವಾಗಿ ವಾಯುಮಾಲಿನ್ಯವನ್ನು ಹದಗೆಡಿಸುವ, ಮತ್ತು ಭೂಮಿಯಲ್ಲಿ ಕರಗದೇ ರೈತರಿಗೆ ವೈರಿಯಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಎಲ್ಲರಿಗೂ ಗೊತ್ತು. ಇದು ಹೇಗೆ ಮಾಡಿದರೂ ನಾಶ ಹೊಂದಲಾರದು, ಕನಿಷ್ಟ ಮೂರು ನಾಲ್ಕು ನೂರು ವರ್ಷಗಳವರೆಗೆ ಭೂಮಿಯಲ್ಲಿ ಕರಗದೇ ಜಲ ಸಂಚಯಕ್ಕೆ ತೊಡಕಾಗುತ್ತಿತ್ತು ಸುಟ್ಟರೂ ಸಹಿತ ಪರಿಸರ ಕಷ್ಮಲಗೊಳ್ಳುವ ಇಂಗಾಲ ಡೈ ಆಕ್ಸೈಡ್ ಉತ್ಪತ್ತಿಯಾಗಿ ಜನರ ಉಸಿರಾಟಕ್ಕೆ ಮಾರಕವಾಗಿತ್ತು. ಇದರ ನಿರ್ನಾಮಕ್ಕೆ ಮದ್ದೇ ಇರಲಿಲ್ಲ ಎಂಬ ಸಂದರ್ಭದಲ್ಲಿ ಭಾರತೀಯ ಯುವ ವಿಜ್ಞಾನಿ ಪಂಕಜ ಅವಧಿಯು ಅವರ ಈ ಪಾಲಥಿನ್ ಅನ್ನು ಭಕ್ಷಿಸುವ ೪-೫ ಕೀಟಗಳನ್ನು ಶೋಧಿಸಿದ್ದಾರೆ.

ಛತ್ತೀಸಗಡದ ಕೃಷಿ ವಿಜ್ಞಾನಿಯಾದ ಇವರು ಸೊಸೈಟಿ ಫಾರ್ ಪಾರ್ಥೇನಿಯಂ ಮ್ಯಾನೇಜ್‌ಮೆಂಟ್ ಸಂಯೋಜಕರಾಗಿ ತಮ್ಮ ಖಾಸಗಿ ಪ್ರಯೋಗಾಲಯದಲ್ಲಿ ೧೩೫ ವಿವಿಧ ಕೀಟಗಳ ಮೇಲೆ ೨ ವರ್ಷ ಪ್ರಯೋಗ ನಡೆಯಿಸಿದರು. ಕೊನೆಗೆ ೫ ವಿವಿಧ ಕೀಟಗಳು ಪಾಲಿಥಿನ್ ತಿನ್ನುವಂತಹವು ಎಂಬುವುದು ಖಚಿತವಾಯಿತು. ಇದಕ್ಕಾಗಿ ‘ಪ್ಲಾಸ್ಟಿಕ್ ಈಟಿಂಗ್ ಆರ್ಗೆನಿಸಂ ಪರಿಯೋಜನಾ’ ಹುಟ್ಟು ಹಾಕಿದರು. ಈ ಪ್ಲಾಸ್ಬಿಕ್ ತಿನ್ನುವ ಕೀಟಗಳಿಗೆ ‘ಪ್ಲಾಸಿಕ್ ಬಗ್’ ಎಂದು ಹೆಸರಿಸಿದ್ದಾರೆ. ಸದ್ಯಕ್ಕೆ ಈ ಕೀಟದ ಇನ್ನಿತರ ವಿವರಗಳು ಮತ್ತು ಅದರ ವೈಜ್ಞಾನಿಕ ಹೆಸರುಗಳನ್ನು ಅವಧಿಯು ರಹಸ್ಯವಾಗಿ ಇರಿಸಿದ್ದಾರೆ.

೧೯೯೯ ರಲ್ಲಿಯೇ ಈ ಬಗ್ಸ್‌ಗಳನ್ನು ಕಂಡು ಹಿಡಿದರೂ ಇವುಗಳ ಜೀವನ ಚಕ್ರ ಇನ್ನು ವಿಸ್ತಾರವಾದ ಅಧ್ಯಯನಕ್ಕಾಗಿ ಹೆಚ್ಚಿನ ಸಮಯ ತೆಗೆದುಕೊಳ್ಳಲಾಯಿತೆಂದು ಹೇಳುತ್ತಾರೆ. ಚಳಿಗಾಲದಲ್ಲಿ ಸಕ್ರಿಯವಾಗಿ ಈ ಕೀಟಗಳು ರೈತನಿಗೆ ಮಿತ್ರನಂತೆ ಇರುತ್ತವೆಂದೂ ಹೇಳುತ್ತಾರೆ. ಈ ಕೀಟಗಳು ೮೦ ವಿವಿಧ ಗಿಡಗಳ ಎಲೆಗಳನ್ನು ತಿನ್ನುವುದರ ಜತೆಗೆ ಅಲ್ಲಿನ ಕೆಲವು ಮುಖ್ಯ ಬೆಳೆಗಳಿಗೆ ವೈರಿಯಾಗಿರುವ ಕಳೆಗಿಡಗಳನ್ನು ತಿಂದು ಹಾಕುತ್ತವೆ. ಇನ್ನೂಂದು ವಿಶೇಷವೆಂದರೆ ಕಪ್ಪು ಬಣ್ಣದ ಪಾಲಿಥಿನ್ ತಿನ್ನುವುದು ಇದರಲ್ಲಿ ಒಂದು ಕೀಟಕ್ಕೆ ಬಹು ಇಷ್ಟವೆಂದು ಹೇಳುತ್ತಾರೆ. ಇವು ಹಣ್ಣಾದ ಮಾವಿನ ಎಲೆಯಂಥಹ ೧೦-೧೨ ಪಾಲಿಥಿನ್ ಎಲೆಗಳನ್ನು ೩-೪ ಗಂಟೆಗಳಲಿ ತುಂಬ ರುಚಿವಹಿಸಿ ತಿನ್ನುತ್ತವೆ ಮತ್ತು ಜೀರ್ಣಿಸಿಕೊಳುತ್ತವೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಕ್ಕರೆ ರೋಗವತಿ ವೇಗದವಘಡವಲ್ಲವೇ ?
Next post ಹೆಂಡತಿಯ ಮಾತ ಕೇಳಿದರೆ

ಸಣ್ಣ ಕತೆ

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

cheap jordans|wholesale air max|wholesale jordans|wholesale jewelry|wholesale jerseys