ಮಹಾನಗರ ರಸ್ತೆ – ಮರುಚೇತನ

ಮಹಾನಗರದ ಮುಖ್ಯ ರಸ್ತೆಯಾಗಿದ್ದು
ನನ್ನ ಅಸ್ತಿತ್ವಕ್ಕೆ ನಾನೇ ಶಪಿಸುತ್ತಾ
ತಲೆ ಎತ್ತುವ ಧನ್ಯತೆ ಕಳೆದಿತ್ತು.

ಬಾಯಾರಿದ ಭೂ ಒಡಲು ಹಸಿರಾಗಿಸಲು
ಧಾರಾಕಾರ ವರುಣನ ವಿಜಯೋತ್ಸವ
ತಗ್ಗು-ಗುಂಡಿಗಳಲಿ ನನ್ನ ದೇಹದ ವಸ್ತ್ರಾಪಹರಣ

ಮಾನ ಬಿಟ್ಟವರು ನನ್ನ ಮಾನ ಮುಚ್ಚಲು
ಬರಿ ಉಸುಕು-ಮಣ್ಣು ಚೆಲ್ಲುತ ಗುಳಂವಾಗಿಸುವರು
ಆಡಳಿತ-ಅಧಿಕಾರಿಗಳು ನೂರು ಸಾವಿರ ಲಕ್ಷ ಲಕ್ಷ

ಸ್ವಾಭಿಮಾನ ಮರೆತ ನಗರವಾಸಿಗಳು
ನನ್ನ ಮೈಮೇಲೆ ನಡೆದಾಡುವಾಗೊಮ್ಮೆ
ಏಳುತ್ತ-ಬೀಳುತ ಹಾಕುವರು ಶಾಪ-ತಾಪ

ತಮಗಾದ ಅನ್ಯಾಯ ಪ್ರತಿಭಟಿಸದಿರುವ
ನಗರವಾಸಿ ನಾಗರಿಕ ವರ್ಗದ
ಭವಿಷ್ಯ ಮೆಲುಕಾಡಿಸುತ್ತಾ ಮೈಚಾಚಿ ಮಲಗಿರುವೆ

ಸ್ವಾತಂತ್ರ್‍ಯ ಸಿಕ್ಕು ಅರ್ಧಶತಕವಾದರೂ
ನಡೆದಿರುವವು ನನ್ನಿಹ ಮೈಮೇಲೆ
ಅತ್ಯಾಚಾರ ಭಾಷೆ-ಕೋಮು ದ್ವೇಷದ ಇರಿತಗಳು

ಕಾರ್ಮಿಕರ ಮೌನ ಹೋರಾಟ – ಮುಷ್ಕರ
ಅಬಲೆಯರ ಆರ್ತನಾದ ಅಪಘಾತ ಗಲಭೆಗಳ
ರಕ್ತದ ಮಡುವಿನಲ್ಲಿ ನರಳಾಟ ಕೇಳುತ ಮೌನವಾಗಿರುವೆ.

ಹುಸಿ ಭರವಸೆ ನೊಂದವರ ನಿಟ್ಟುಸಿರು
ಕೇಳುತ ನೋಡುತ ಬೇಸತ್ತು ಮಲಗಿದ್ದೆ
ಪುಳಕಿತಗೊಂಡೆ ಈ ದಿನ ವೀರಯೋಧರ ಶವಯಾತ್ರೆ ತಿಳಿದು

ದಶ ದಶಕಗಳಿಂದ ಬರಿ ಡಂಬಾಚಾರದ
ನಯ – ವಂಚಕರಿಂದ ತುಳಿಸಿಕೊಂಡು ಸಾಕಾಗಿದ್ದ
ಮೈಮನ ಕಾತರಿಸುತ್ತಿದೆ ವೀರಯೋಧನ ಸ್ಪರ್ಶಕ್ಕಾಗಿ

ಮಾತೃ-ಭೂಮಿಯ ಗಡಿ-ಶಿಖರಗಳಲಿ
ಮಡಿದ-ಮಕ್ಕಳು ಮನೆ ಎನ್ನದೆ
ರಾಷ್ಟ್ರಪ್ರೇಮದ ದೃಢತೆಯಲಿ ಶತ್ರುಗಳ ಸದ್ದಡಗಿಸಿ
ಜೀವ ನೀಡಿದ ವೀರ ಆ ಧೀರ ಸೈನಿಕರು

ನಗರ-ನಾಗರಿಕ ಸನ್ಮಾನ-ಹೆಮ್ಮೆಯ ದುಃಖದಿ ಕಣ್ಣೀರು
ಶವಪೆಟ್ಟಿಗೆಯಡಿ ವೀರ ಜವಾನರು
ಕೊನೆ ಮೆರವಣಿಗೆ ಮೈಮೇಲೆ ಸಾಗುವ ಕ್ಷಣ
ರೋಮಾಂಚನದಿ ದೇಹದ ಕಣ ಕಣವೂ ಧನ್ಯ ಧನ್ಯ

ಹೊತ್ತವರು-ಹೆತ್ತವರೆಲ್ಲಾ ಅತ್ತರು ಹೆಮ್ಮೆಯಲಿ
ಸಾಗಿತ್ತು ರಸ್ತೆಯುದ್ದಕ್ಕೂ ಅಂತಿಮ ಶವ ಯಾತ್ರೆ-ಜಾತ್ರೆ
`ಜವಾನ-ಅಮರ ರಹೇ’ ಮುಗಿಲು ಮುಟ್ಟಿದ ಘೋಷಣೆ

ತಾಯಿನಾಡಿಗಾಗಿ ಮಡಿದ ವೀರ ಜವಾನರ ಸ್ಪರ್ಶ
ನನ್ನ ಅಸ್ತಿತ್ವದ ಸಾರ್ಥಕತೆಗೆ ಜೀವ ತುಂಬಿತು
ಮರು ಚೇತನದಿ ಈ ತನುವು ಧನ್ಯತೆ ಪಡೆದಿತ್ತು.

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೋಟೆ
Next post ಕರುಣೆಯೇ ಇಲ್ಲ

ಸಣ್ಣ ಕತೆ

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

cheap jordans|wholesale air max|wholesale jordans|wholesale jewelry|wholesale jerseys