ಅಮ್ಮ

ನನ್ನಮ್ಮ ಬೆಂಗಳೂರಿಗೆ ಬಂದವಳಲ್ಲ
ಮೆಜೆಸ್ಟಿಕ್‌ನ ವಾಕಿಂಗ್‌ಸ್ಟಿಕ್ಕಾಗಿ ಸಿಕ್ಕಾಗಿ
ತನ್ನತನ ಮುಕ್ಕಾಗಿ ಸಿನಿಮಾ ಮಹಲು
ರಸ್ತೆಯಮಲಿಗೆ ಸಿಕ್ಕಿದವಳಲ್ಲ.
ಸೀಳುಹಾದಿಯಲ್ಲಿ ಕೂಳೆಹೊಲದಲ್ಲಿ ಕಾಲುಬಲಿತು
ಕೂದಲು ನರೆತವಳು.
ಸದಾ ಸೌದೆ ಬುತ್ತಿ ನೆತ್ತಿಮೇಲಿಟ್ಟು ಕರ್ಮಿಸುವ
ನೀತಿ ನಿಯತ್ತು ನಿರ್ಮಿಸುವ
ನಿದರ್ಶನವಾದವಳು.
ಭೂತ ಗರ್ಭದಲ್ಲಿ ಹೊತ್ತು ವರ್ತಮಾನದಲ್ಲಿ ಹೆತ್ತು
ಭವಿಷ್ಯದ ಬಾಗಿಲಿಗೆ ನನ್ನ ಬಿಟ್ಟವಳು.
ಬಗಲಲ್ಲಿ ಜಗಲಿಯಲ್ಲಿ ಹರಿಸುವ ತೊದಲಲ್ಲಿ
ತಣಿದು ಕೈಹಿಡಿದು ನಡೆಸಿದವಳು
ಮೌನಗೌನಿನಲ್ಲಿ ಅರಳುಮನವಾದವಳು.

ಆಕೆ ಬಿತ್ತಿದ ಬಯಲು ಮಮತೆ ಮಡಿಲು
ಸುಳಿಯಾಗಿ ಬಿಡುತ್ತೆ.
ಕುರ್ಜಿಗೆಯಿಂದ ಕಳೆ ತೆಗೆದು ಪೈರು ಮುದ್ದಿಸುವ
ಸಹಜ ಸ್ಫುರಣ ಹೂರಣ ಒಳಗೆಳೆಯುತ್ತೆ.

ಅಲ್ಲಿ ಹಬ್ಬಿದಾಲದ ನೆರಳು; ತಬ್ಬಿ ತಣಿಯುವ ಕರುಳು
ಆಳದ ಹೆಜ್ಜೆಯೊತ್ತುಗಳು; ಭೂತ ಬದ್ಧಗಳು;
ಭಟ್ಟಂಗಿ ಸ್ವಾ-ಗತ ಶೈಲಿ ಮೈಲಿಗಲ್ಲುಗಳು.

ಅಮ್ಮನ ಬಾಳ ಬೇಲಿಯಲ್ಲಿ ಬೆಳೆದೆ.
ತೋಳುತಲ್ಪದಲ್ಲಿ ಒಂದೊಂದೇ ತುತ್ತು ತಿಂದೆ.
ನೆರಳು ಕರುಳು ಕರೆದ ಸುಖಕ್ಕೆ ಸಂದೆ.
ಬರಬರುತ್ತ ಬೇಲಿಯಾಚೆ ಬದುಕಿನ ಬೆದಕು; ಚುರುಕು.
ಗೇಟು ದಾಟಿ ಹೊರಗೆ ಹೂದೋಟ ನೋಟ; ಸಿದ್ದಾರ್ಥಮಾಟ.
ಬಿಸಿಲ ಟಿಸಿಲಲ್ಲಿ ಹೂ ಹಣ್ಣಿನಾಸೆ; ಬುದ್ಧಪಿಪಾಸೆ.
ಹುಡುಕುತ್ತ ಹೊರಟವನನ್ನು ಬೇಲಿಬಿಟ್ಟು-
ನೋಡುತ್ತಾಳೆ; ಭವಿಷ್ಯ ತಿನಸು ಕನಸುತ್ತಾಳೆ.
ಹೋಗುತ್ತಲೇ ಇರುವ ನಾನಲ್ಲೇ ಕರಗುವುದನು
ಕಾಣಲಾರದೆ ಕೈಬೀಸಿ ಧ್ವನಿಸುತ್ತಾಳೆ.
ಓಡಿಬಂದು ಗೇಟಿನ ಬಳಿ ತಾಯ ತೆಕ್ಕೆಗೆ ಬಿದ್ದ
ನನಗೆ ಹೂದೋಟದಾಸೆ.
ತಾಯ ಬೇಲಿ-ನನ್ನ ಹೂದೋಟಗಳ
ಗೇಟು ಒಂದಾಗಿಸುವಾಸೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರೀತಿ ನೀತಿ
Next post ಹುಡುಗ – ಹುಡುಗಿ

ಸಣ್ಣ ಕತೆ

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

cheap jordans|wholesale air max|wholesale jordans|wholesale jewelry|wholesale jerseys