ಎಚ್ಚರಿಕೆ

ಹಣೆ ಬರಹದಣೆಕಟ್ಟು
ಜಾತಿ ಮತಗಳ ಸುಟ್ಟು
ಬಂದೇವು ಬಡವರು
ಹೊಸ ಪಂಜು ಹಿಡಿದು.

ಭೋರ್ಗರೆವ ನೀರೊಳಗೆ
ಬಡವರೊಂದಾದೇವು
ಹನಿ ಹನಿಯ ಕಿಡಿಗೊಳಿಸಿ
ಅಲೆಯಾಗಿ ಹರಿದೇವು.

ಅಪ್ಪಳಿಸಿ ಅಲೆಯಾಗ್ನಿ
ಬೆಟ್ಟ ಬೂದಿಯಾದೀತು
ಮಂತ್ರ ಹೇಳುವ ಮರ
ಮೊದಲೆ ಬಿದ್ದಿತು.

ರತ್ನಗಂಬಳಿ ಪೀಠ
ಸುಳ್ಳು ಸಂಸ್ಕೃತಿ ಪಾಠ
ಉರಿ ಉಕ್ಕುವ ನೆರೆಗೆ ಸಿಕ್ಕಿ
ಅತ್ತು ಕರೆದಾವು-
ಸತ್ತು ಹೋದಾವು.

ಕೊಚ್ಚಿ ಹಾಕುವ ಕಿಚ್ಚು
ಹುಚ್ಚಾಗದಂತೆ
ಸುಟ್ಟ ಹಾದಿಯ ತುಂಬ
ಹೊಸ ಹಾಡು ಹರಿದೀತು
ಹೊಸ ಮನಸು ಮೆರೆದೀತು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರೊಫೆಶನಲಿಸಂ ಎಂಬ ಮಾಯೆ
Next post ಮಾತಿನ ಮರ್ಮ

ಸಣ್ಣ ಕತೆ

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

cheap jordans|wholesale air max|wholesale jordans|wholesale jewelry|wholesale jerseys