ನಿಲುವು

ಪ್ರಿಯ ಸಖಿ,
ಇದು ಕಂಪ್ಯೂಟರ್ ಯುಗ. ಬಟನ್ ಒತ್ತಿದರೆ ಸಾಕು ಬೇಕೆಂದ ಮಾಹಿತಿ ನಿಮಿಷಾರ್ಧದಲ್ಲಿ ಕಣ್ಮುಂದೆ ಬರುತ್ತದೆ. ಇದು ಮಾಹಿತಿಯ ವಿಷಯಕ್ಕಾಯ್ತು. ಆದರೆ, ವ್ಯಕ್ತಿಯೊಬ್ಬನ ಭಾವನೆಗಳನ್ನು ಹೀಗೆ ಇಷ್ಟೇ ಸಲೀಸಾಗಿ ಅರ್ಧೈಸಲಾದೀತೇ? ವ್ಯಕ್ತಿಯ ಭಾವನೆಗಳನೇಕ ಇಂದಿಗೂ ನಿಗೂಢವಾಗಿಯೇ ಉಳಿದಿವೆ. ಎಷ್ಟೇ ಸರಳ ವ್ಯಕ್ತಿಯನ್ನೂ ಪರಿಪೂರ್ಣವಾಗಿ ಅರ್ಥ ಮಾಡಿಕೊಳ್ಳುವುದು ಕಷ್ಟದ ಮಾತೇ. ಅದಕ್ಕೆಂದೇ ವ್ಯಕ್ತಿ ಗುಂಪಿನಲ್ಲಿದ್ದಾಗಲೂ ಒಬ್ಬಂಟಿಯೇ! ಅವನ ಮನದ ಭಾವನೆಗಳು ಅವನಿಗಷ್ಟೇ ಪರಿಪೂರ್ಣವಾಗಿ ಅರ್ಥವಾದೀತು. ಎಷ್ಟೆಲ್ಲಾ ಸೃಷ್ಟಿಸಿರುವ ಮಾನವನಿಗೆ, ಮನಸ್ಸಿಗೊಂದು ಸಮರ್ಥ ಕನ್ನಡಿಯನ್ನು, ವ್ಯಕ್ತಿಯ ಮನಸ್ಸನ್ನೋದುವ ಕಂಪ್ಯೂಟರ್ ಒಂದನ್ನು ಇಂದಿಗೂ ಸೃಷ್ಟಿಸಲಾಗಿಲ್ಲ.

ವ್ಯಕ್ತಿಯೊಬ್ಬ ಅರ್ಥವಾಗದಿರುವುದಕ್ಕೆ ಒಂದು ಕಾರಣ ಅವನು ಹಾಕಿಕೊಂಡಿರುವ ಮುಖವಾಡಗಳು. ಸಮಯಕ್ಕೆ ತಕ್ಕಂತೆ, ಎದುರಿನ ವ್ಯಕ್ತಿಗೆ ತಕ್ಕಂತೆ, ಸಂದರ್ಭಕ್ಕೆ ತಕ್ಕಂತೆ ಮುಖವಾಡಗಳನ್ನು ಹಾಕಿಕೊಳ್ಳುವ ಕಲೆ ಮನುಷ್ಯನಿಗೆ ಚೆನ್ನಾಗಿ ಕರಗತವಾಗಿದೆ. ಕೆಲವೊಮ್ಮೆ ತಾನು ತೊಟ್ಟುಕೊಂಡ ಮುಖವಾಡವೇ ನಿಜಮುಖವೆಂದು ಅವನ ಮುಖವಾಡ ಸಮರ್ಥವಾಗಿ ನಟನೆಯಾಡುತ್ತದೆ.

ಹಾಗೆಂದು ವ್ಯಕ್ತಿಯೊಬ್ಬನಿಗೆ ಖಾಸಗಿ ಬದುಕೊಂದು ಇರಲೇಬಾರದೆಂದು ಇದರರ್ಥವಲ್ಲ. ಆದರೆ ತನ್ನ ವ್ಯಕ್ತಿತ್ವವನ್ನು ಗಟ್ಟಿಗೊಳಿಸಿಕೊಂಡು ಬದುಕುವ ವ್ಯಕ್ತಿ ಪೊಳ್ಳು ಸ್ವಾರ್ಥಕ್ಕೆ ಬಲಿಯಾಗಿ ಹೇಗೆಂದರೆ ಹಾಗೆ ವ್ಯಕ್ತಿತ್ವ ಬದಲಿಸುವ ಊಸರವಳ್ಳಿಯಾಗಬಾರದಲ್ಲವೇ ಸಖಿ? ಜಿ. ಎಸ್. ಶಿವರುದ್ರಪ್ಪನವರ ‘ನಿಲುವು’ ಎಂಬ ಈ ಕವನದ ಸಾಲುಗಳು ಇದನ್ನೇ ಸಮರ್ಥಿಸುತ್ತವೆ.

ಬಚ್ಚಿಟ್ಟುಕೊಂಡು ಬದುಕುವುದು ನನಗಿಷ್ಟವಿಲ್ಲ
ಹಾಗಂತ ಎಲ್ಲವನ್ನೂ ಬಿಚ್ಚಿ ಹರಾಜಿಗಿಡುತ್ತೇನೆಂದು
ಇದರರ್ಥವಲ್ಲ
ಬಹುದೊಡ್ಡ ಮಾತನಾಡುತ್ತ
ದಿನದಿನದ ಸರಳ ಸಾಧಾರಣದ ಬದುಕಿ –
ಗವಮಾನ ಮಾಡುವವರನ್ನು ಕಂಡರೆ
ನನಗೆ ಆಗುವುದಿಲ್ಲ
ತೂಗಾಡುವ ಕಿರೀಟಗಳಿಗೆ ತಕ್ಕಂತೆ
ತಲೆಯ ಆಕಾರಗಳನ್ನು ಬದಲಾಯಿಸುತ್ತ
ಪರದಾಡುವುದು ನನಗೆ ಅಭ್ಯಾಸವಿಲ್ಲ

ಎನ್ನುತ್ತಾರೆ. ವ್ಯಕ್ತಿಯೊಬ್ಬ ಪ್ರಾಮಾಣಿಕನಾದಾಗ ಮುಖವಾಡಗಳಿಲ್ಲದೇ ಕಿರೀಟವಿದೆಯೆಂದು ಅದರ ಆಕಾರಕ್ಕೆ ತಕ್ಕಂತೆ ತನ್ನ ತಲೆಯನ್ನು ಬದಲಿಸದೇ ತನ್ನ ನಿಲುವನ್ನು, ತನ್ನ ವ್ಯಕ್ತಿತ್ವವನ್ನು ಸಮರ್ಥಿಸುವಂತೆ ಪಾರದರ್ಶಕವಾಗಿ ಬದುಕಿದರೆ ಅದಕ್ಕಿಂತಾ ದೊಡ್ಡ ಬದುಕು ಬೇರಾವುದಿದೆ? ಅಲ್ಲವೇ ಸಖಿ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭಾಳ ಒಳ್ಳೇವ್ರ್‍ ನಮ್ ಮಿಸ್ಸು
Next post ಶೆಲ್ಲಿಗೆ

ಸಣ್ಣ ಕತೆ

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

cheap jordans|wholesale air max|wholesale jordans|wholesale jewelry|wholesale jerseys