ಎದ್ದೇಳು ಎದ್ದೇಳು ಕನ್ನಡಿಗ

ಎದ್ದೇಳು ಎದ್ದೇಳು ಕನ್ನಡಿಗ
ಎಚ್ಚರದಿಂದೇಳು ಕನ್ನಡಿಗ
ಉದಯವಾಯಿತು ಕನ್ನಡ ನಾಡು ||
ಉದಯರಾಗಲಹರಿಯಿಂ ಹಾಡು
ಜಯ ಕನ್ನಡ ಜಯಕನ್ನಡ
ಜಯಕನ್ನಡವೇ ನಮ್ಮುಸಿರು ||

ಹಚ್ಚಿರಿ ಕನ್ನಡದ ಹಣತೆಯನು
ಮೊಳಗಿಸಿ ಕನ್ನಡ ಜಯಭೇರಿಯನ್ನು ||
ಭಾರಿಸಿತು ಕನ್ನಡ ಡಿಂಡಿಮವ
ಕಟ್ಟಿತು ಹಸಿರು ತೋರಣವ
ಸಂಭ್ರಮಿಸಿತು ನವಕರ್ನಾಟಕ
ನವ ಚೈತನ್ಯದ ನೀಡಿತು || ಜ ||

ಕೆಂಪು ಹಳದಿ ಬಾವುಟ
ಕೆಚ್ಚೆದೆಯನು ಸಾರಿ ಕ್ರಾಂತಿ
ಶಾಂತಿ ದಿವ್ಯ ಮೊಗವ ತೋರಿ
ಜಯ ಕನ್ನಡ ಜಯಕನ್ನಡ
ಜಯಕನ್ನಡವೇ ನಮ್ಮುಸಿರು
ಹಚ್ಚಿರಿ ಕನ್ನಡದ ಹಣತೆಯನು
ಮೊಳಗಿಸಿ ಕನ್ನಡ ಜಯಭೇರಿಯನು ||

ಸಾವಿರಾರು ವರುಷಗಳ ಹರುಷ
ಹೊನಲು ಹಿಗ್ಗಿನೊಲುಮೆಯಲಿ
ಕುಣಿದು ನಲಿದು ಭಾವೈಕ್ಯತೆಯಲಿ ಕೂಡಿ
ಜಯಕನ್ನಡ ಜಯಕನ್ನಡ
ಜಯ ಕನ್ನಡವೇ ನಮ್ಮುಸಿರು
ಹಚ್ಚಿರಿ ಕನ್ನಡದ ಹಣತೆಯನು
ಮೊಳಗಿಸಿ ಕನ್ನಡ ಜಯಭೇರಿಯನ್ನು ||

ಗಂಗ ಕದಂಬಾದಿ ರಾಷ್ಟ್ರಕೂಟ
ಹೊಯ್ಸಳಾಧೀಶರು ಕಟ್ಟಿದ
ವೀರ ಧೀರ ತ್ಯಾಗ ಕಲಿಗಳ
ಭವ್ಯ ನಾಡು ನುಡಿಯು ಕನ್ನಡ
ಜಯ ಕನ್ನಡ ಜಯ ಕನ್ನಡ
ಜಯ ಕನ್ನಡವೇ ನಮ್ಮುಸಿರು
ಹಚ್ಚಿರಿ ಕನ್ನಡದ ಹಣತೆಯನು
ಮೊಳಗಿಸಿ ಕನ್ನಡ ಜಯ ಭೇರಿಯನ್ನು ||

ಮುನ್ನುಗ್ಗಿದೆ ಮುನ್ನಡೆದಿದೆ
ಕಗ್ಗತ್ತಲ ಮೌಢ್ಯಗಳ ಕಳಚಿ
ವಿಜ್ಞಾನ ದೀವಿಗೆಯ ಹಚ್ಚಿ
ಅಭಿಮಾನ ಸ್ವಾಭಿಮಾನದಿಂ
ನುಡಿದಿದೆ ಜಯಕನ್ನಡ
ಜಯ ಕನ್ನಡ ಜಯಕನ್ನಡ
ಜಯಕನ್ನಡವೇ ನಮ್ಮುಸಿರು
ಬೆಳಗಿರಿ ಕನ್ನಡ ಜೋತಿಯನು
ಮೊಳಗಿಸಿ ಕನ್ನಡ ಜಯಭೇರಿಯನ್ನು ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರಗತಿ ಅಥವಾ ದಾಸ್ಯವಿಮೋಚನೆ – ೮ನೆಯ ಖಂಡ – ಸಾಮರ್‍ಥ್ಯಸಂಚಯ
Next post ದೇವರಿಗೆ ಬೈದೆ

ಸಣ್ಣ ಕತೆ

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

cheap jordans|wholesale air max|wholesale jordans|wholesale jewelry|wholesale jerseys