ಮಾತಿನಲಿ ಹೃದಯವಿರಲಿ

ಪ್ರಿಯ ಸಖಿ,
ಇಂದು ನಾವು ಆಡುತ್ತಿರುವ ಮಾತು ತನ್ನ ಮೌಲ್ಯವನ್ನೇ ಕಳೆದುಕೂಂಡಿದೆ. ಬೇಕಾದಾಗ ಬೇಕಾದಂತೆ ಮಾತಾಡುವ, ಅದಕ್ಕೆ ಬದ್ಧರಾಗಿರಬೇಕೆಂಬ ಯಾವುದೇ ಸಿದ್ಧಾಂತವನ್ನೂ ನಾವಿಂದು ಇಟ್ಟುಕೊಂಡಿಲ್ಲ. ಆಡುವ ಮಾತಿಗೂ ನಡೆದುಕೊಳ್ಳುವ ರೀತಿಗೂ ಒಂದಕ್ಕೊಂದು ಸಂಬಂಧವೇ ಇರುವುದಿಲ್ಲ. ಅದನ್ನು ಕಂಡೇ ಕವಿ ಬಿ. ಅರ್. ಲಕ್ಷ್ಮಣರಾವ್ ಅವರು ತಮ್ಮ ‘ಇಂದು’ ಎಂಬ ಹನಿಗವನದಲ್ಲಿ ಹೀಗೆನ್ನುತ್ತಾರೆ.

     ಮಾತು
ತನ್ನ ನಂಬಿಕೆ ಕಳೆದುಕೊಂಡಿರುವ
ಇಂದು
ಪ್ರತಿ ದಿನವೂ
ಏಪ್ರಿಲ್ ಒಂದು

ಯಾರದೋ ಮಾತನ್ನು ನಂಬಿಕೂತವನು ಇಂದು ಮೂರ್ಖನಾಗುವ ಕಾಲ ಬಂದಿದೆ. ‘ಮಾತನಾಡುವ ಮೊದಲು ಅದರಲ್ಲಿ ನಿನ್ನ ಹೃದಯವಿದೆಯೇ ಎಂದು ಪರೀಕ್ಷಿಸು ಎನ್ನುವ ಹಳೆಯ ನಾನ್ನುಡಿಯೊಂದು ನಮ್ಮಲ್ಲಿದೆ. ಹೃದಯವಿರಲಿ ಇಂದು ಮಾತಿನಲ್ಲಿ ನಾಲಿಗೆಯೂ ಇರುವುದಿಲ್ಲ. ಬರಿಯ ಗಾಳಿಯಲ್ಲಿ ಮಾತುಗಳು ಹಾರಾಡುತ್ತವೆ.

ಮಾನವೀಯ ಮೌಲ್ಯಗಳು ಕಳೆದು ಹೋಗುತ್ತಿರುವ ಇಂದಿನ ದಿನಗಳಲ್ಲಿ ಮಾತೂ ತನ್ನ ಅರ್ಥ ಕಳೆದುಕೊಳ್ಳುತ್ತಿದೆ. ತನ್ನ ಲಾಭಕ್ಕಾಗಿ ಯಾವ ಮಾತನ್ನಾದರೂ ಹೇಗೆ ಬೇಕಾದರೂ ಆಡಿ ಕಾರ್ಯ ಸಾಧಿಸಿಕೊಳ್ಳುವ ಹಂತಕ್ಕೆ ಮನುಷ್ಯ ಬಂದು ಮುಟ್ಟಿದ್ದಾನೆ. ಅವನಿಗೆ ತನ್ನ ಸ್ವಾರ್ಥ, ಸ್ವಹಿತಗಳೇ ಮುಖ್ಯ. ಇಂತಹ ನಾಟಕಗಳನ್ನರಿಯದ ಮುಗ್ಧ ವ್ಯಕ್ತಿಗಳೂ ನಮ್ಮಲ್ಲಿದ್ದಾರೆ. ಅವರೆಲ್ಲ ಇಂತಹ ಕಪಟ ಮಾತುಗಾರರ ಮಾತುಗಳನ್ನು ನಂಬಿ ಕ್ಷಣ ಕ್ಷಣವೂ ಮೂರ್ಖರಾಗುತ್ತಿರುತ್ತಾರೆ.

ನುಡಿದಂತೆ ನಡೆಯಬೇಕು ನಡೆದಂತೆ ನುಡಿಯಬೇಕು ಎಂಬ ತತ್ವಕ್ಕೆ ನಾವು ಯಾವಾಗ ಬದ್ಧರಾಗುವುದಿಲ್ಲವೋ ಅಲ್ಲಿಯವರೆಗೂ ನಾವು ಆತ್ಮವಂಚನೆ ಮಾಡಿಕೊಳ್ಳುತ್ತಲೇ ಇರುತ್ತೇವೆ. ಮಾತಿಗೂ ಅದರದ್ದೇ ಮಹತ್ವವಿದೆ. ಪ್ರಾಮಾಣಿಕ ಮಾತಿನಿಂದಲೇ ಮಾನವನಿಗೆ ಗೌರವ, ಪ್ರತಿಷ್ಠೆಗಳು ಬರುತ್ತವೆ ಎಂದು ಎಲ್ಲಿಯವರೆಗೆ ಮನುಷ್ಯ ತಿಳಿದು ಕೊಳ್ಳುವದಿಲ್ಲವೋ ಅಲ್ಲಿಯವರೆಗೆ ಬೇರೆ ಯಾರೇ ಅವನನ್ನು ಕ್ಷಮಿಸಿದರೂ ಅವನ ಆತ್ಮ ಅವನನ್ನು ಎಂದೂ ಕ್ಷಮಿಸುವುದಿಲ್ಲ. ಈ ಕುರಿತು ನಿನ್ನ ನಿಲುವೇನು ಸಖಿ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚುಟುಕುಗಳು
Next post ವೀರಗಲ್ಲು

ಸಣ್ಣ ಕತೆ

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

cheap jordans|wholesale air max|wholesale jordans|wholesale jewelry|wholesale jerseys