ಧರೆಗಿಳಿದು ಬಂದಿದೆ

ಧರೆಗಿಳಿದು ಬಂದಿದೆ ಸ್ವರ್ಗದ ತಾಣವು
ಸುಂದರ ಮಂದಿರವು ನಮ್ಮ ಭಾರತ ಭೂಮಿ ||

ಭುವನ ಮನೋಹರ ಚೆನ್ನಯ ತಾಣವು
ತನ್ಮಯ ಚಿತ್ತದ ಜೀವರಾಶಿಗಳು
ಸೃಷ್ಟಿ ಸ್ಥಿತಿ ಲಯವು ನಮ್ಮ ಭಾರತವು ||

ಯುಗ ಯುಗಗಳೆ ತಾಳಿದೆ
ಗತ ವೈಭವ ಸಾರಿದೆ
ಕಣ ಕಣವೂ ನಿನ್ನ ಸ್ತುತಿಯನ್ನು
ಜಪಿಸಿದೇ ವಿಶ್ವ ಚೇತನವು
ನಮ್ಮ ಭಾರತವು ||

ವೀರ ರಮಣಿಸಂತ ಮಹಾತ್ಮರ
ಮಹಿಮೆ ಸಾರುತ ಮೆರೆದು
ಸುಭದ್ರತೆಯ ತೋರಿ ಜಗಕೆ
ಶಾಂತಿ ಮಂತ್ರವ ನೀಡಿದೆ ನಮ್ಮ ಭಾರತವು ||

ದ್ವೇಷ ಕ್ಲೇಶಗಳ ಅಳಿಸುತ
ಅಹಿಂಸೆ ಮಾಲೆಯ ಧರಿಸುತ
ಅಂದಕಾರ ನೀಗಿಸುತ ತ್ಯಾಗ
ಧರ್ಮ ಸೌಕ್ಯತೆಯ ಬೀಡಿದು
ನಮ್ಮ ಭಾರತವು ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತಿರುಪ್ಪಲ್ಲಾಣ್ಡು- ೧
Next post ಕಂಬನಿಯೆ ಸುರಿಯದಿರು

ಸಣ್ಣ ಕತೆ

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

cheap jordans|wholesale air max|wholesale jordans|wholesale jewelry|wholesale jerseys