ಗಿಳಿ ಮತ್ತು ಸೀತೆ

ಹೇಳು ಗಿಳಿಯೆ ಹೇಳು ಇಂದೇಕೆ ನೀ ಮೌನ
ಕಣ್ಣೀರ ಸುರಿಸುತ್ತಾ ಕೊರಗುವೇಕೆ!
ಇಷ್ಟು ವರ್ಷಗಳಿಂದ ಜೊತೆ ಗೆಳತಿಯಾಗಿದ್ದ
ಸೀತೆ ಮಿಥಿಲೆ ತೊರೆದು ಹೋಗುವಳೆಂದೆ!

ಸೀತೆ ಮನ ತುಂಬಿದವ ಶ್ರೀರಾಮ
ಶ್ರೀರಾಮ ವರಿಸಿದ ಹೆಣ್ಣು ಸೀತೆ
ಇಬ್ಬರಾಸೆಗಳಿಂದು ಕೈಗೂಡಿ ಅವರಿಂದು
ಸತಿಪತಿಗಳಾಗಿಹುದು ದೈವಲೀಲೆ |

ಇಂದು ಮಿಥಿಲಾಪುರವೂ ವೈಭವದಿ ಮಿಂಚಿಹುದು
ಅರಮನೆಯ ತುಂಬೆಲ್ಲಾ ಜನಸಾಗರ
ಜನಕರಾಜನ ಕಣ್ಣು ತುಂಬಿ ನಿಂತಿದೆ ಇಂದು
ಸಂತೋಷದಲಿ ದುಃಖ ಕೂಡಿಕೊಂಡು |

ನೋಡು ಗಿಳಿಯೆ ನಿನ್ನ ಆ ಗೆಳತಿ ಸೀತೆಯನು
ಹಿರಿಯ ಸಂತಸದಲ್ಲು ದುಃಖಭಾವ
ಚಿಗುರು ಬೆರಳುಗಳಿಂದ ತಂದೆ ಕಣ್ಣೀರನ್ನು
ಒರೆಸಿ ನಗಿಸುತಲಿಹುದು ಕಾಣದೇನು!

ಸಲಹಿದಪ್ಪನ ಹೊರತು ಆತ್ಮೀಯರಾರಿಹರು!
ನೀನಲ್ಲವೇ ಅವಳ ಪ್ರೀತಿ ಗೆಳತಿ!
ನಿನ್ನ ಮರೆಯುವಳೇನೇ, ನಿನ್ನ ಬಿಟ್ಹೋಗುವಳೆ!
ತವರು ನೆನಪಿನ ಒಡವೆ ನೀನೆ ತಾನೆ!

ನೋಡು ಅರಮನೆ ಮುಂದೆ ಕನಕರಥ ನಿಂತಿಹುದು
ಶ್ರೀರಾಮ ಅದರಲ್ಲಿ ಕುಳಿತಿಹನು
ಕಣ್ಣ ಕುಡಿ ನೋಟದಲೆ ರಾಮ, ಸೀತೆಯ ಕರೆವ
ನಿನಗೆ ಆಯಿತೆ ಲಜ್ಜೆ! ಘಾಟಿ ನೀನು|
ನಿನ್ನ ಇನಿದನಿ ನಿನ್ನ ಇಂಪಾದ ಸವಿನುಡಿಯ
ಎಲ್ಲೂ ಕೇಳದೆ ಸೀತೆ ಹುಡುಕುತಿಹಳು
ಬಾ ನನ್ನ ತೊಡೆವೇರು ಎನುತ ಕರೆಯುತಿಹಳು
ಪಿಸುಮಾತು ಮೆಲು ದನಿಯ ದಾಟಿಯಲ್ಲಿ|

ನವ ದಂಪತಿಗಳ ನಡುವೆ ನನ್ನ ಇರುವಿಕೆ ಸರಿಯೇ
ಎಂದೇಕೆ ಬೇಸರ ಪಡುತಲಿರುವೆ ||
ಸೀತೆ ಪ್ರತಿರೂಪದಲಿ ಆ ರಥದ ಕೆಳೆಯು ನೀನು
ಪಯಣಿಸಮ್ಮ ಗಿಳಿಯೆ ಮುಂದೆ ನೀನು !
ಬಾ ಗಿಳಿಯೆ ರಥವೇರು ಸೀತೆ ಕರೆಯುತಲಿಹಳು
ಹೊತ್ತಾಯ್ತು ಇನ್ನೇಕೆ ಚಿಂತೆ ನಿನಗೆ!
ಮೌನ ಬಿಡು ಸುತ್ತೆಲ್ಲ ಚೈತ್ರ ಚೆಲುವಿದೆ ನೋಡು
ಹಾಡುತ್ತ ನೀ ಸಾಗು ಹೆಮ್ಮೆಯಿಂದ |
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

ಪಾಳೇಗಾರ Previous post ಪಾಳಯಗಾರರು – ಬಂಗಾಳ ಪ್ರಾಂತದಲ್ಲಿರುವ ಜಮೀನ್ದಾರರು
Next post ಕವಿತೆ…

ಸಣ್ಣ ಕತೆ

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

cheap jordans|wholesale air max|wholesale jordans|wholesale jewelry|wholesale jerseys