ಎಲ್ಲೆಡೆ ಸಲ್ಲುವುದು ಒಳಿತು

ಪ್ರಿಯ ಸಖಿ,
ಅಲ್ಲಾಗಲಿ ಅಥವಾ ಇಲ್ಲಾಗಲಿ
ಸಲ್ಲದೆನ್ನಬೇಡ
ಒಳಿತು
ಎಲ್ಲೂ ಒಂದೇ ನೋಡ
ಸೆಣಸು ನಿಸು ಒಳ್ಮನಸು ಪತಾಕೆ
ಬೀಳದಂತೆ ಜೋಕೆ !
ಕವಿ ಗೋಪಾಲಕೃಷ್ಣ ಅಡಿಗರ ‘ಅಲ್ಲಾಗಲಿ’ ಎಂಬ ಕವನದ ಈ ಸಾಲುಗಳನ್ನು ಓದಿದೆಯಾ ಸಖಿ? ಎಲ್ಲ ಕೆಡಕುಗಳನ್ನು ನೋಡಿ ನೋಡಿ ತಲ್ಲಣಿಸುತ್ತಿದ್ದ ಎದೆಗೆ ಕೊಂಚ ತಂಪಾಯಿತೆ? ಒಳಿತು ಇಲ್ಲಿ ಇಲ್ಲವೇ ಇಲ್ಲ ಎಂದು ಪರಿತಪಿಸಿ ಕೊರಗಬೇಡ ಎಲ್ಲೆಡೆಯೂ ಒಳಿತು ಇದ್ದೇ ಇದೆ. ಒಳಮನಸ್ಸಿನಲ್ಲೇ ಕೆಟ್ಟದ್ದರೊಂದಿಗೆ ಸೆಣಸು. ಒಳಿತಿನ ಪತಾಕೆ ಕೆಳಜಾರಿ ಬೀಳದಂತೆ ಜೋಪಾನವಾಗಿ ನಿಲ್ಲಿಸು ಎಂದು ಹಿತನುಡಿಗಳನ್ನಾಡಿದ್ದಾರೆ ಕವಿ.

ನಮ್ಮ ಎಲ್ಲ ಒಳಿತು ಕೆಡುಕಿನ ಮೂಲ ನಮ್ಮೊಳಗೇ ಇದೆ. ಅದನ್ನು ಆ ದಿಕ್ಕುಗಳಲ್ಲಿ ನಡೆಸುವವರೂ ನಾವೇ. ಒಳಿತಿನೆಡೆಗೇ ನಾವು ನಡೆಯುತ್ತೇವೆ ಎಂದು ಮನದಲ್ಲಿ ದೃಢವಾಗಿ ನಿಶ್ಚಯಿಸಿದರೆ, ಅದನ್ನು ಮೀರುವ ಧೈರ್ಯ ಬಹುಶಃ ನಮಗೂ ಬರಬಾರದು! ಪದ್ಯವನ್ನು ಮುಂದುವರೆಸುತ್ತಾ ಕವಿ,
ಒಳಮನ ದೇವರ ಮನೆ ಮಣಿಯಲ್ಲಿ
ಇದೆ ಇಂದಿಗೂ ಆ ದೀಪದ ಮಲ್ಲಿ
ಎಣ್ಣೆ ತೀರಿ ಕರಟಿದರೂ ಬತ್ತಿ
ಒತ್ತಿ ತುಳಿದರೂ ತಮಸ್ಸು ಮುತ್ತಿ
ಹೂಡಿದೆ ಕತ್ತಲ ಕೊಡೆ ರಣ
ಈ ಚಿತ್ಕಣ ಘನ ಚಿರಂತನ
ನೋಡಿ ಬೀಗು, ಸಂದೇಹನೀಗು
ಸಾಷ್ಟಾಂಗ ಬಾಗು ಅದಕೆ
ಒಲವಿನ ಹನಿಮಣಿ ಕೊಡುಕೈಗಾಣಿಕೆ
ಎರೆಯೊ ನಿನ್ನ ಎದೆಯೊರತೆ
ಬೆಳಕಿಗೆ ಬಾರದಂತೆ ಕೊರತೆ!
ಎನ್ನುತ್ತಾರೆ ಒಳಮನಸ್ಸಿನ ದೇವರಮನೆಯಲ್ಲಿ ಎಣ್ಣೆ ತೀರಿ, ಬತ್ತಿ ಕರಟಿದ ಹಣತೆ ಇದೆ. ತುಂಬಿರುವ ಕತ್ತಲಿನೊಡನೆ ನಿರಂತರವಾಗಿ ಯುದ್ಧ ಸಾರಿದೆ ಮನಸ್ಸು. ಮನದಲ್ಲಿ ಸದಾ ಒಳಿತು ಕೆಡುಕಿನ ಕುರಿತು ವಿವೇಚನೆ ನಡೆದೇ ಇದೆ. ಅದನ್ನು ನೋಡಿ ಹೆಮ್ಮೆ ಪಡು. ಕತ್ತಲ ಮೇಲೆ ಬೆಳಕು ಗೆಲುವು ಸಾಧಿಸೇ ಸಾಧಿಸುತ್ತದೆ ಸಂದೇಹ ಬೇಡೆನ್ನುತ್ತಾ ಧೈರ್ಯ ತುಂಬುತ್ತಾರೆ ಕವಿ.

ಬೆಳಕನ್ನು ಶಾಶ್ವತವಾಗಿ ನುಂಗಿಬಿಡಲು ಕತ್ತಲು ಶತಪ್ರಯತ್ನ ಮಾಡಿದರೂ ಕತ್ತಲಿನ ಅರಿವಿಗೇ ಬರದಂತೆ ಮೆಲ್ಲ ಮೆಲ್ಲಗೆ ಬೆಳಕು ಪಸರಿಸಿ ಕತ್ತಲನ್ನು ಹೊಡೆದೋಡಿಸಿ ಬಿಡುತ್ತವಲ್ಲವೇ ಸಖಿ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಒಂದು ಎಲ್ಲಕ್ಕಿಂತ ಮೊದಲು
Next post ಕಾಲನಾಗಗಳೊಡಲು ಜಗದ ಮನ

ಸಣ್ಣ ಕತೆ

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

cheap jordans|wholesale air max|wholesale jordans|wholesale jewelry|wholesale jerseys