ಗೆಳೆತನ

ಗೆಳೆತನ

ಚಿತ್ರ: ಅಪೂರ್ವ ಅಪರಿಮಿತ

ಪ್ರಿಯ ಸಖಿ,
ಪ್ರತಿಯೊಬ್ಬರ ಬಾಳಿನಲ್ಲೂ ಗೆಳೆತನವೆನ್ನುವುದು ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ ಎಷ್ಟೋ ಬಾರಿ ಗೆಳೆತನವೇ ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುತ್ತದೆ ಅದಕ್ಕೆಂದೇ ಆಂಗ್ಲ ನಾಣ್ಣುಡಿಯೊಂದು “ನಿನ್ನ ಗೆಳೆಯನನ್ನು ತೋರಿಸು ನೀನು ಏನೆಂದು ಹೇಳುತ್ತೇನೆ” ಎನ್ನುತ್ತದೆ. ಮಾನವ ಸಂಘಜೀವಿ ಅವನಿಗೆ ಸ್ನೇಹಿತರು ಬೇಕೇಬೇಕು. ಆದರೆ ಜಾರ್ಜ್ ವಾಷಿಂಗ್ಟನ್ ಅವರ ಈ ಮಾತುಗಳನ್ನು ನೋಡು

associate yourself with
men of good quality
if you esteem your
own reputation,
for it is better to be
alone than in
bad company

ನಿನ್ನ ಗೌರವ, ಪ್ರತಿಷ್ಟೆಗೆ ಬೆಲೆ ಕೊಡುವುದಾದರೆ ಉತ್ತಮ ಗುಣಗಳಿರುವ ವ್ಯಕ್ತಿಗಳೊಂದಿಗೆ ಸೇರು. ಕೆಟ್ಟವರ ಸಹವಾಸಕ್ಕಿಂತ ಒಂಟಿಯಾಗಿರುವುದೇ ಲೇಸು ಎಂದು ಹಿತನುಡಿಗಳನ್ನಾಡಿದ್ದಾರೆ. ಉತ್ತಮ ಗುಣಗಳಿರುವ ವ್ಯಕ್ತಿ ನಮ್ಮ ಗೆಳೆಯನಾದರೆ ಅವನಿಂದ ನಾವೂ ಉತ್ತಮರಾಗಲು ಸಾಧ್ಯ. ಜೊತೆಗೆ ಅಂತಹ ವ್ಯಕ್ತಿಯ ಸಾಹಚರ್ಯದಿಂವ ನಮಗೆ ಗೌರವವೂ ಸಿಕ್ಕುತ್ತದೆ. ಅದೇ ಕೆಟ್ಟವರ ಸಹವಾಸದಿಂದ ಅವಮಾನ, ನೋವು, ಅಪಖ್ಯಾತಿಗಳು ಕಟ್ಟಿಟ್ಟ ಬುತ್ತಿ. ಜೊತೆಗೇ ಅಂತವರ ಒಡನಾಟದಿಂದ ನಮ್ಮ ಉತ್ತಮ ಗುಣಗಳೂ ಮಸುಕಾಗಿ ಹೋಗುತ್ತವೆ. ಆದ್ದರಿಂದಲೇ ಇಂತವರ ಒಡನಾಟ, ಗೆಳೆತನಕ್ಕಿಂತ ಒಂಟಿಯಾಗಿರುವುದೇ ಮೇಲೆನ್ನುತ್ತಾರೆ ವಾಷಿಂಗ್ಟನ್.

ಉತ್ತಮ ಗೆಳೆಯರನ್ನು ಹೊಂದಲು ಪೂರ್ವಜನ್ಮದ ಪುಣ್ಯವಿರಬೇಕು ಎನ್ನುತ್ತಾರೆ ಹಿರಿಯರು. ಇದು ನಿಜವೂ ಹೌದು. ಉತ್ತಮ ಗೆಳೆಯರು ದೊರಕುವುದು, ಉತ್ತಮ ಒಡನಾಡಿಗಳನ್ನು ಹುಡುಕುವುದು ಕಷ್ಟದ ಕೆಲಸವೇ. ಹಾಗೆಂದು ಸಿಕ್ಕ ಸಿಕ್ಕವರನ್ನೇ ನಮ್ಮ ಸ್ನೇಹಿತರನ್ನಾಗಿ ಮಾಡಿಕೊಂಡು, ನಂತರ ಪಶ್ಚಾತ್ತಾಪ ಪಡುವುದರ ಬದಲು, ಒಳ್ಳೆಯ ಸ್ನೇಹಿತ ಒಬ್ಬನಿದ್ದರೂ ಸಾಕು ಅಥವಾ ಯಾರೂ ಇಲ್ಲದಿದ್ದರೆ ಒಂಟಿಯಾಗಿಯೇ ಇದ್ದು ನಮ್ಮೆಲ್ಲ ಭಾವನೆಗಳನ್ನು ನಮ್ಮ ಮನಸ್ಸಿನೊಂದಿಗೇ ಹಂಚಿಕೊಂಡು, ಒಳಿತು-ಕೆಡುಕುಗಳ ಕುರಿತು ವಿವೇಚಿಸೋಣ. ಮನವನ್ನೇ ಆತ್ಮೀಯ ಗೆಳೆಯನನ್ನಾಗಿ ಮಾಡಿಕೊಳ್ಳೋಣ. ಇದಕ್ಕೆ ನೀನೇನನ್ನುತ್ತೀ ಸಖಿ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜಾತಿ ಗೀತಿ ಎಂಬುದೆಲ್ಲ
Next post ಅದರ ಮಾತಿನ್ನೇಕೆ

ಸಣ್ಣ ಕತೆ

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

cheap jordans|wholesale air max|wholesale jordans|wholesale jewelry|wholesale jerseys