ಹುಚ್ಚು ಯಾರಿಗೆ?

ಪ್ರಿಯ ಸಖಿ,
ಅವಳು. ದಿನವೂ ಯಾರದಾದರೂ ಮನೆಯ ಜಗುಲಿಯ ಮೇಲೆ ತನ್ನ ದೊಡ್ಡ ಬಟ್ಟೆಯ ಗಂಟನ್ನು ಇಟ್ಟುಕೊಂಡು ಕೂರುತ್ತಾಳೆ. ಸದಾ ಬಾಯಿ ವಟಗುಟ್ಟುತ್ತಲೇ ಇರುತ್ತದೆ ಕೆಲವೊಮ್ಮೆ ಯಾವುದಾದರೂ ಹಾಡನ್ನು ರಾಗವಾಗಿ ಹಾಡುತ್ತಿರುತ್ತಾಳೆ. ಇನ್ನೊಮ್ಮೆ ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡುತ್ತಿರುವ ಶಿಕ್ಷಕಿಯಂತೆ ಜೋರು ಜೋರಾಗಿ ಏನನ್ನೋ ಹೇಳುತ್ತಿರುತ್ತಾಳೆ. ಕೆಲವೊಮ್ಮೆ ಎತ್ತರದ ದನಿಯಲ್ಲಿ ಬಯ್ಯುತ್ತಿರುತ್ತಾಳೆ. ಇಂಗ್ಲೀಷನ್ನು ಅರೆದು ಕುಡಿದವಳೇನೋ! ನಿರರ್ಗಳವಾಗಿ ಇಂಗ್ಲೀಷಿನಲ್ಲಿ ಏನೇನೋ ವದರುತ್ತಿರುತ್ತಾಳೆ. ಶಿಷ್ಟ ಭಾಷೆಯಲ್ಲಿ ಹೇಳುವುದಾದರೆ ಅವಳೊಬ್ಬ ಮನೋರೋಗಿ. ಆಡುಭಾಷೆಯಲ್ಲಿ ಹೇಳುವುದಾದರೆ ಅವಳೊಬ್ಬ ಹುಚ್ಚಿ!

ನೋಡಲು ಲಕ್ಷಣವಾಗಿರುವ, ಸುಸಂಸ್ಕೃತ ಮನೆತನದವಳೆನಿಸುವ ಮಧ್ಯ ವಯಸ್ಸಿನ ಈ ಹೆಣ್ಣಿಗೆ ಅದ್ಯಾವ ಆಘಾತವಾಗಿರಬಹುದು? ಅವಳ ಬುದ್ದಿ ಕೆಡಲು ಕಾರಣರಾರು? ಸಮಾಜವೇ? ಮನೆಯವರೇ? ಮಿತ್ರರೇ? ಶತ್ರುಗಳೇ? ಹೆದರಿಕೆ ಹುಟ್ಟಿಸುವಂಥಾ, ಅಸಹ್ಯಗೊಳ್ಳುವಂತಾ ವೇಷ ತೊಟ್ಟು, ತಲೆಬಿರಿದುಕೊಂಡು, ಚಂಡಿಚಾಮುಂಡಿಯಂತೆ ಅಟ್ಟಹಾಸದಿ ನಗುತ್ತಾ, ಬೈಯ್ದುಕೊಳ್ಳುತ್ತಾ ತಿರುಗುವ ಇವಳು ಹೀಗೇಕಾದಳು?

ತಿನ್ನಲು ಏನಾದರೂ ಕೊಟ್ಟರೆ Thanks ಎಂದು ಹೇಳುವಷ್ಟು ಬುದ್ಧಿಯೂ, ತನ್ನನ್ನು ಕಲ್ಲಿನಿಂದ ಹೊಡೆಯಬಂದವರಿಗೆ ತಾನೂ ಕಲ್ಲಿನಿಂದ ಹೊಡೆದಟ್ಟಬೇಕೆಂಬ ಮಾನವ ಸಹಜ ತಿಳುವಳಿಕೆ ಇರುವ ಇವಳ ಸರಿಪಡಿಸಲಾಗುವುದಿಲ್ಲವೇ? ಅಥವಾ ಅವಳು ಸರಿಯಾಗುವುದು ಯಾರಿಗೂ ಬೇಕಿಲ್ಲವೇ? ಅವಳನ್ನು ಹುಚ್ಚಿಯಾಗಿಸಿದ ಸಮಾಜಕ್ಕೆ ಅವಳನ್ನು ಸರಿಪಡಿಸುವ ಜವಾಬ್ದಾರಿಯೂ ಇರಬೇಕಲ್ಲವೇ?

ಅವಳನ್ನೊಂದು ಮನರಂಜನೆಯ ವಸ್ತುವನ್ನಾಗಿ ಮಾಡಿಕೊಂಡು ಅವಳನ್ನು ಹಿಂಸಿಸಿ. ಗೋಳು ಗುಟ್ಟಿಸಿ, ಕಲ್ಲಿನಿಂದ ಹೊಡೆದು ತಮ್ಮ ವಿಕೃತ ಮನೋಭಾವವನ್ನು ಪ್ರದರ್ಶಿಸುವ ವ್ಯಕ್ತಿಗಳನ್ನು ಕಂಡಾಗ ಯಾರಿಗೆ ಹುಚ್ಚು? ಅವಳಿಗೋ? ಇವರಿಗೋ? ಅನಾಗರೀಕರಂತೆ ವರ್ತಿಸುತ್ತಿರುವ ಇವರು ಮನುಷ್ಯರೋ ಅಥವಾ ಮೃಗಗಳೋ ಎಂಬ ಪ್ರಶ್ನೆ ಕಾಡುತ್ತದೆ. ಬುದ್ಧಿ ಸ್ಥಿಮಿತದಲ್ಲಿಲ್ಲದಿದ್ದರೂ ತನ್ನನ್ನು ಹಿಂಸಿಸದವರಿಗೆ ಏನೂ ಮಾಡದೆ ತನಗೆ ತೊಂದರೆ ಕೊಡುವವರಿಗೆ ಮಾತ್ರ ತಾನೂ ತೊಂದರೆ ಕೊಡುವ ಆ ಹೆಂಗಸು ಬುದ್ಧಿ ಸರಿಯಿದ್ದೂ, ಅಮಾನವೀಯವಾಗಿ ಅವಳನ್ನು ಹಿಂಸಿಸಿ ಕಿರುಕುಳ ನೀಡುವ ಇಂತವರಿಗಿಂತಾ ಎಷ್ಟೋ ಮೇಲು ಎಂದೆನಿಸುತ್ತದೆ.

ಕಲ್ಲುಗಳಂದಾದ ಗಾಯದಿಂದ ಒಸರುವ ರಕ್ತಕ್ಕೆ ಮಣ್ಣು ಮೆತ್ತಿಕೊಳ್ಳುತ್ತಾ, ಕಣ್ಣಿನಲ್ಲಿ ನೀರು ಸುರಿಸುತ್ತಾ ಆ ಹೆಂಗಸು ‘ರಾಕ್ಷಸರು! ರಾಕ್ಷಸರು!’ ಎಂದುಕೊಳ್ಳುತ್ತಾ ಹೋಗುವಾಗ, ಬುದ್ಧಿ ಸರಿಯಿಲ್ಲದವರೂ, ಹಲವು ಬಾರಿ ನಿಜವನ್ನೇ ನುಡಿಯುತ್ತಾರಲ್ಲಾ? ಎಂದೆನಿಸುತ್ತದೆ ಅಲ್ಲವೇ ಸಖಿ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಲ್ಲಾ ಮರಕ್ಕು ಮೈತುಂಬಾ ಎಲೆ
Next post ಬಟ್ಟೆ

ಸಣ್ಣ ಕತೆ

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

cheap jordans|wholesale air max|wholesale jordans|wholesale jewelry|wholesale jerseys