ಹಾತೊರೆಯುತಿದೆ ಮನಸು

ಹಾತೊರೆಯುತಿದೆ ಮನಸು
ಓಡುವೆ ಏಕೆ ದೂರ
ಕಾತರಿಸುತಿದೆ ಕನಸು
ಕಾಡುವೆ ಏಕೆ ಅಪಾರ

ನಗೆ ಚೆಲ್ಲಿದ ನೋಟ
ಅಚ್ಚಾಗಿದೆ ಒಳಗೆ
ಹುಚ್ಚಾಗಿ ಪಲುಕು
ಕಿಚ್ಚಾಗಿದೆ ಬದುಕು

ನೀನಿರದ ನಾನು
ಶಶಿಯಿರದ ಬಾನು
ಇದು ಅಲ್ಲ ಕವಿತೆ
ನಂಬು ಇದನು ನೀನು

ನೀನಿಡುವ ಹೆಜ್ಚೆ
ನವಿಲಿಗೇಕೊ ಲಜ್ಜೆ
ಲಜ್ಜೆ ಹೆಜ್ಜೆ ಗೆಜ್ಜೆ
ನನಗೊ ಸ್ವರ್ಗ ಸಜ್ಜೆ

ನೀನಾದರೆ ಧರಣಿ
ನಾನಾಗುವೆ ಭರಣಿ
ನಮಗಿನ್ನೇಕೆ ನೆಲೆ
ಹರಿಯುವ ಆಗಿ ಹೊಳೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾಲ್ಕು ಘಟನೆಗಳು
Next post ಭಾವ ಶುದ್ಧಿ ಸಾಧಿಸಿ

ಸಣ್ಣ ಕತೆ

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

cheap jordans|wholesale air max|wholesale jordans|wholesale jewelry|wholesale jerseys