ಕಿಡ್ನಿ ಕತೆ

ದೇವರು ದೊಡ್ಡವನು. ಮನುಷ್ಯನಿಗೆ ಅನುಕೂಲವಾಗಲೆಂದೇ ಎರಡು ಕಿಡ್ನಿಗಳನ್ನು ನೀಡಿದ್ದಾನೆ!

ಚೀನಾದ ಬೀಜಿಂಗ್‌ನ ಜಿನ್‌ಹುವಾ ನಗರದ ದೊನ್‌ಗ್ಯಾಂಗ್ ಪೀಪಲ್ಸ್ ಆಸ್ಪತ್ರೆಯಲ್ಲಿ ದಿನಾಂಕ ೨೮.೦೭.೨೦೧೫ರಂದು ಮಂಗಳವಾರ ದಿನದಂದು ಸತತವಾಗಿ ಎರಡು ತಾಸುಗಳವರೆಗೆ ನಡೆದ ತುರ್ತು ಶಸ್ತ್ರಚಿಕಿತ್ಸೆಯಲ್ಲಿ ಹೇ ಡಾಂಗ್ ಎಂಬ ವ್ಯಕ್ತಿಯ ಎಡಬದಿಯ ಕಿಡ್ನಿಯಿಂದ ಸುಮಾರು ೪೨೦ ಕಲ್ಲುಗಳನ್ನು ವೈದ್ಯರು ಹೊರತೆಗೆದು ವ್ಯಕ್ತಿಯನ್ನು ಬದುಕಿಸಿದ್ದಾರೆ.

ಈ ವ್ಯಕ್ತಿ ಹೆಚ್ಚು ಜಿಪ್ಸಂ ಟೊಪು ಖಾದ್ಯ (ಬರೀ ಖನಿಜಯುಕ್ತ ಆಹಾರವನ್ನು) ಸೇವಿಸುತ್ತಿದ್ದ ಹಾಗೂ ನೀರು ಕುಡಿಯುವ ಹವ್ಯಾಸವೇ ಇರಲಿಲ್ಲ..!

“ಈ ಸೋಯಾ ಉತ್ಪನ್ನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕ್ಯಾಲ್ಸಿಯಂ ಇರುತ್ತದೆ. ಜಿಪ್ಸಂ ಟೊಪು ಸಹ ಅದರಿಂದಲೇ ತಯಾರಾಗುತ್ತಿದ್ದು ಹೆಚ್ಚಿನ ನೀರು ಕುಡಿದು ಬೆವರು ಭಸಿಯುವ ಕೆಲಸ ಮಾಡುವುದರಿಂದ ಮಾತ್ರ ಈ ಥರದ ಆಹಾರವನ್ನು ಜೀರ್ಣಿಸಿಕೊಳ್ಳಲು ಸಾಧ್ಯ…” ಎಂದು ವೈದ್ಯರಾದ ವೈಯುಬಿನ್ ಅವರು ವಿವರಿಸಿದ್ದಾರೆ.

ಹೇ ಡಾಂಗ್‌ಂಗೆ ತೀವ್ರ ಹೊಟ್ಟೆ ನೋವು ಕಾಣಿಸಿದ್ದರಿಂದ ಸಿಟಿ ಸ್ಕ್ಯಾನ್ ಮಾಡಲಾಯಿತು. ಕಿಡ್ನಿಯಲ್ಲಿ ಅಪಾರ ಪ್ರಮಾಣದಲ್ಲಿ ಕಲ್ಲುಗಳು ತುಂಬಿ ತುಂಬಿ ಹೋಗಿದ್ದವು! ಆಗ ಸತತವಾಗಿ ಎರಡು ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ೪೫ ನಿಮಿಷಗಳಲ್ಲಿ ಕಲ್ಲುಗಳನ್ನು ಹೊರತೆಗೆಯಲಾಯಿತು. ಅಷ್ಟೊಂದು ಕಲ್ಲುಗಳನ್ನು ತೆಗೆದು ನನ್ನ ಕೈ ಹಾಗೂ ಬೆರಳುಗಳು ಮರಗಟ್ಟಿದ್ದವು…. ಎಂದು ವೈದ್ಯರು ಅಲ್ಲಿ ಸೇರಿದ್ದ ಜನರಿಗೆ ವಿವರಿಸಿದರು.

ಆದ್ದರಿಂದ ಪ್ರತಿಯೊಬ್ಬರು ಪ್ರತಿನಿತ್ಯ ೨-೩ ಲೀಟರ್ ನೀರನ್ನು ಕಡಿಮೆ ಎಂದರೂ ಕುಡಿಯಲೇಬೇಕು. ದೇಹದಲ್ಲಿನ ಕಲ್ಮಶವನ್ನು ಹೊರಹಾಕಲು ಕಿಡ್ನಿಗಳು ಸರಿಯಾಗಿ ಕೆಲಸ ಮಾಡಲು ನೀರು ಬೇಕೇಬೇಕು.

ಆದ್ದರಿಂದ ಹೆಚ್ಚು ಹೆಚ್ಚು ದ್ರವರೂಪದ ಆಹಾರ ಸೇವಿಸಲೇ ಬೇಕು. ಏನಂತಿರಾ?! ಹೌದು ಅಂತೀರಿ. ಅನ್ನಲೇಬೇಕು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾಯಿ
Next post ಪಂಚಭೂತ

ಸಣ್ಣ ಕತೆ

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

cheap jordans|wholesale air max|wholesale jordans|wholesale jewelry|wholesale jerseys