ಜಾಗತೀಕರಣದ ಹೊಸಿಲಲ್ಲಿ ನಿಂತಿರುವ ರೈತನಿಗೊಂದು ಕಿವಿಮಾತು

ಯಾವಾಗ ನೋಡಿದ್ರೂ
ಜರಿಶಾಲು, ರೇಷ್ಮೆ ಪೇಟ
ದೀಪಾ-ಧೂಪಾ
ಹೂವು-ಹಾರ ಜೊತೆಗೆ
ನಾಯಕರ ನಗೂ ಮುಖ
ಹೊತ್ಕೊಂಡು ಬರ್‍ತಾ ಇದ್ದ
ಪೇಪರ್‌ನಾಗೆ ನಿನ್ನ
ಸುದ್ದಿನೂ ಓದ್ದೇ ಕಣಪ್ಪಾ…

ದಿಕ್ಕಿಲ್ಲದಂಗೆ ರಾಶಿ ಬಿದ್ದಿದ್ದ
ಟೊಮೊಟೊ, ಆಲೂಗಡ್ಡೆ, ಮೆಕ್ಕೆಜೋಳದ
ಜತೆಗೆ ಕಂಗಾಲಾಗಿ ಕೂತಿದ್ದ
ನಿನ್ನ ಚಿತ್ರಾನೂ ಮುಖಪುಟದಾಗೆ
ನೋಡ್ದೆ ಕಣಪ್ಪಾ

ಅಲ್ಲಾ ಕಣಪ್ಪಾ…
ಭಾರತಾಂಬೆಯ ಬೆನ್ನೆಲುಬು
ಅಂತ ಯಾಮಾರಿ ಕುಂತಿದ್ಯಲ್ಲಾ
ಈಗ ನೋಡು…
ನೀ ಯಾರ ಅಂತ
ಕೇಳೋರು ಇಲ್ಲ…

ನೀ ಹತ್ತು ಪೈಸೆಗೆ ಮಾರೋದನ್ನ
ಹತ್ತು ರೂಪಾಯಿಗೆ ತಕ್ಕೊಳೋ
ನಾ ಹೇಳ್ತೀನಿ ಕೇಳು…

ನೀ ಹದರಬೇಡ
ಇಲಿ ಪಾಷಾಣ
ಕೀಟ ನಾಶಕ ಕುಡ್ದು
ಜೀವ ತಕ್ಕೊಬ್ಯಾಡ

ಭೂಮಿ-ಕಾಣಿ, ಮಳೆ-ಬೇಳೆ
ಎಲ್ಲಾ ಮರ್‍ತು ಬಿಡು
ನೀ ಬಿತ್ತೋದೂ ಬ್ಯಾಡ
ನೀ ಬೆಳೆಯೋದೂ ಬ್ಯಾಡ
ಕೈ ಕೆಸರು ಮಾಡಿಕೊಳ್ಳೋದೂ ಬ್ಯಾಡ
ಬೆವರ ಸುರಿಸೋದೂ ಬ್ಯಾಡ
ನುಸಿ ಪೀಡೆ, ಕೀಟ ಬಾಧೆ, ಪೇಟೆ ಧಾರಣೆ
ಅಂತ ತಲೆಕೆಡಿಸಿಕೊಳ್ಳಬ್ಯಾಡ
ಅಕ್ಕಿ, ರಾಗಿ, ಕೊತ್ತಿಮಿರಿ, ಕರಿಬೇವು
ಎಲ್ಲಾ ಅಮೇರಿಕಾದಿಂದ ಬರುತ್ತೆ
ನೀ ಸುಮ್ಕಿದ್ದು ಬಿಡು ಆರಾಮ…

ಆ ಹಳೆ ಪಂಚೆ
ಹರಕಲು ಚಡ್ಡಿ
ಹವಾಯಿ ಚಪ್ಪಲಿ
ಮೋಟು ಬೀಡಿ ಮೊದ್ಲು ಬಿಸಾಕು
ಜೀನ್ಸ್ ಪ್ಯಾಂಟು, ರಂಗೀಲಾ ಷರಟು
ಮೊದ್ಲು ತೊಟ್ಕೊ…

ಪಿಜ್ಜಾ ತಿನ್ನು, ಕೋಲಾ ಕುಡಿ
ಪ್ಯಾಕ್‌ನಲ್ಲಿ ಮಡಗಿರೋ
ಚಿಕನ್ನು, ಮಟನ್ನು ತಿಂದು
ಪಾಪು, ರ್‍ಯಾಪು ಕೇಳ್ತಾ
ಟಿ. ವಿ. ನಲ್ಲಿ W.W.F ನೋಡ್ತಾ ಮೊಬೈಲ್‌ನಲ್ಲಿ ಕಷ್ಟ-ಸುಖ
ಇಚಾರಿಸ್ತ ಸುಮ್ಕಿದ್ದು ಬಿಡು ಆರಾಮ…
ಹಾಂ… ಹಾಗೆ… ಹಾಗೆ…
ನೋಡ್ತಾ ಇರು ಹ್ಯಾಗೆ
ಹ್ಯಾಗೆ ಆಗುತ್ತೆ ಮ್ಯಾಜಿಕ್ಕು!
ನಿನ್ನೂರು ಮಂಗಾಪುರ ಅಲ್ವಾ?
ಈಗ ನೋಡು…
ಹ್ಯಾಗೆ ಆಗಿದೆ ಸಿಂಗಾಪುರ!

ನೋಡ್ತಾ ಇರು…
ಹೈಟೆಕ್ ಆಸ್ಪತ್ರೆ ಬತ್ತದೆ
ಯಮಗಾತ್ರ ಪವರ್ ಪ್ರಾಜೆಕ್ಟ್ ಬಂದು
ರಾತ್ರಿ-ಹಗಲು ದೀಪ ಉರೀತದೆ
ಕುಡಿಯೋ ನೀರು ಬಾಟ್ಲಿನಲ್ಲಿ
ತಂತಾನೆ ತುಂಬ್ಕೊಂಡು
ಮನೆ ಬಾಗಿಲಿಗೆ ಬಂದು ಬೀಳ್ತದೆ

ಎತ್ತಿನ ಬಂಡಿಗಳು
ಏರೋಪ್ಲೇನ್ ಥರಾ ಹಾರ್‍ಕೋತ
ಸೀದಾ ದಿಲ್ಲಿಗೇ ಹೋಗ್ಬೇಕು
ಆಪಾಟಿ ರಸ್ತೆಗೋಳು ಬತ್ತವೆ
ನಿನ್ನ ಮಕ್ಕಳು, ಮರಿಮಕ್ಕಳು
ದೊಡ್ಡ ದೊಡ್ಡ ಶಾಲೆಗೆ ಹೋಗ್ತಾವೆ
ಎ. ಬಿ. ಸಿ. ಡಿ ಕಲಿತಾವೆ
ಅಮೆರಿಕೆಗೆ ಹಾರಿ
ಕೊಪ್ಪರಿಗೆ ಹಣ ಬಾಚ್ತಾವೆ…

ಹಬ್ಬೆಟ್ಟು-ಛಾಪಾಕಾಗದ
ಸಾಲ, ಬಡ್ಡಿ, ಜಪ್ತಿ
ಉಹುಂ ಕನಸಿನಲ್ಲೂ ಯೋಚಿಸಬ್ಯಾಡ
ನೀ…ರಾಮ-ಕೃಷ್ಣ ಅನ್ನೋದು ಬ್ಯಾಡ
ಕಂಪ್ಯೂಟರ್ ದೇವತೆ
ನಿನ್ನ ಮೈಮ್ಯಾಲೆ ಬಂದು
ಖಂಡಿತ ಮೋಕ್ಷ ಕಾಣಿಸ್ತಾಳ…

ಅದಕ್ಕೆ ಕಣಪ್ಪಾ ನಾ ಹೇಳ್ತೀನೀ ಕೇಳು…
ನೀ ಸುಮ್ಕಿದ್ದು ಬಿಡು…
ಬಾಯ್ ಮುಚ್ಕೊಂಡು… ಕಿವಿ ಮುಚ್ಕೊಂಡು…
ಕಣ್ಣು ಮುಚ್ಕೊಂಡು…

ಹಾಂ ಹಾಗೆ… ಹಾಗೆ…
ಉಸಿರೆತ್ತಬ್ಯಾಡ….
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭ್ರಮಣ – ೧೦
Next post ಇರು

ಸಣ್ಣ ಕತೆ

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

cheap jordans|wholesale air max|wholesale jordans|wholesale jewelry|wholesale jerseys