ಕರುಣೆ ತೋರು ನೀನೆನಗೆ

ಕರುಣೆ ತೋರು ನೀನೆನಗೆ
ನನ್ನ ಬಾಳ ಏಳಿಗೆಗೆ |
ದಾರಿದೀಪವಾಗೆನಗೆ
ನನ್ನ ಬಾಳ ಈ ಹಾದಿಗೆ ||

ಗುರುನೀನೇ ಗುರಿತೋರಿಸು ನೀನೇ
ಇನ್ನಾರಿಹರೆನಗೆ ನೀನಲ್ಲದೀಬಾಳಿಗೆ|
ಬದುಕ ಬವಣೆಯ ಬಿಡಿಸು
ಬಾಳ ಮಹಿಮೆಯ ತಿಳಿಸು||

ಏಕೆ ಮತ್ತೆ ಮತ್ತೆ ಪುನರಪಿಸುವೆವೋ ಕಾಣೆ
ನಾನಿದರ ಮರ್ಮವನರಿಯೆ?|
ನಿನ್ನ ಹೆಜ್ಜೆಯಲೆನ್ನ ಹೆಜ್ಜೆಯ ನೀನಿರಿಸು
ಈ ಸಾಗರದ ದಡವ ನೀ ಸೇರಿಸು||

ಪಾಪವೋ, ಶಾಪವೋ, ಪೂಣ್ಯವೋ
ನನ್ನ ಹಿಂದಿನ ಅಕರ್ಮವೊ ಕಾಣೆ|
ಕೊನೆಗಾಣಿಸಿ ಜನ್ಮದಲಿ ಎಲ್ಲದನು
ನೀ ದಯತೋರಿ ಪರಿಪೂರ್ಣಗೊಳಿಸೆನ್ನಾ
ಮತ್ತೆ ಮರುಕಳಿಸದಂತೆ ಈ ನರಜನ್ಮ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶ್ರೀಮಂತ
Next post ಹೀಗಿರಲಿ ಭಕ್ತಿ

ಸಣ್ಣ ಕತೆ

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

cheap jordans|wholesale air max|wholesale jordans|wholesale jewelry|wholesale jerseys