ಏಕೆ? ಕಣ್ಣಂಚಲಿ

ಏಕೆ? ಕಣ್ಣಂಚಲಿ
ಕಂಬನಿ ಹೊರಸೂಸಿ
ಕಣ್ಣಬಟ್ಟಲುಗಳು
ತುಂಬಿ ಬಂದಿಹವು|
ಯಾವುದೋ ಎದೆಯಾಳದ
ನೋವ ಹೊರಹಾಕಲು
ಹೃದಯ ತಳಮಳಿಸುತಿಹುದು||

ಹಳೆಯ ಪ್ರೇಮದನುಭವದ
ಸಿಹಿಕಹಿನೆನಪು, ನನ್ನ
ನೆನಪಿಸಿಯೊಮ್ಮೊಮ್ಮೆ
ದುಃಖವನು ತಂದಿಡುವುದು||

ಅಂದು ನಿನ್ನಂತರಂಗವ
ಅರಿತು ನಿನ್ನ ಪ್ರೀತಿಯ
ಸ್ವಾಗತಿಸಿ
ಆಸ್ವಾದಿಸಿದಿದ್ದರೆ
ಅದೆಷ್ಟು ಚೆನ್ನವೆಂದೆನಿಸಿ
ದುಃಖ ಉಲ್ಬಣಗೊಳ್ಳುತಿದೆ||

ಅಂದು ನೀನಾಗಿ ಬಂದು
ನಿನ್ನಾಭಿಲಾಷೆಯನು
ಮುಚ್ಚುಮರೆ ಇಲ್ಲದೆ
ತೆರೆದಿಟ್ಟಾಗ, ನಾನು
ನಾಟಕೀಯ ಉತ್ತರ ನೀಡಿ
ಏನನೋ ಸಾಧಿಸಿದೆನೆಂದು ಬೀಗಿ,
ನಿನ್ನ ಬೇಸರಗೊಳಿಸಿದ ನೆನೆದು
ದುಃಖ ಉಮ್ಮಳಿಸುತಿಹುದು|

ಇಂದು ನನ್ನಿಂದ ನನ್ನ ಜೀವನ
ಹೀಗೆ ಬರಡಾಗಿರುವುದ ಕಂಡು|
ನಿನ್ನ ನಿಷ್ಕಲ್ಮಷ ಪ್ರೀತ್ಯಾದರ
ಆಹ್ವಾನ ನಿರ್ಲಕ್ಷಿಸಿದುದಕೆ ಇಂದು
ದುಃಖ ಉದ್ಭವಿಸುತಿಹುದು||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾವೂ ಸಾಯಬೇಕೆ?
Next post ದೀಪ ಬೆಳಗಿಸು

ಸಣ್ಣ ಕತೆ

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

cheap jordans|wholesale air max|wholesale jordans|wholesale jewelry|wholesale jerseys