ನೀನೊಲಿದ ಗಳಿಗೆ

ಹೊಕ್ಕುಳಲ್ಲಿ ಹೂಗುಟ್ಟಿ
ಬಾಯಿಗೆ ಬರದವನೆ,
ಮಕ್ಕಳ ಕಣ್ಣುಗಳಲ್ಲಿ
ಬಾಗಿಲು ತೆರೆದವನೆ.
ಬುದ್ಧಿ ಸೋತು ಬಿಕ್ಕುವಾಗ,
ಹಮ್ಮು ಹಠಾತ್ತನೆ ಕರಗಿ
ಬದುಕು ಕಾದು ಉಕ್ಕುವಾಗ
ಜಲನಭಗಳ ತೆಕ್ಕೆಯಲ್ಲಿ
ದೂರ ಹೊಳೆವ ಚಿಕ್ಕೆಯಲ್ಲಿ
ನಕ್ಕು ಸುಳಿಯುವೆ.
ಆಗ ಕೂಗಿದರೆ ನಾನು
ನನ್ನ ದನಿ
ತೂಗುವ ಜೇನು, ಸಂಜೆಗೆ
ಮಾಗುವ ಬಾನು, ಹುಣ್ಣಿಮೆ
ತಾಜಮಹಲಿನ ಕಮಾನು

ಕ್ಷಣದಲ್ಲಿ ಹೊಳೆದವನು
ದಿನವಿಡೀ ಕಾಯಿಸುವೆ
ಮುಗಿಲ ಬಟ್ಟಲಿನಲ್ಲಿ ಜಲವ ತುಂಬಿಟ್ಟು
ಗಾಳಿಗೈಯಲ್ಲಿ ಅದನ್ನು
ಫಟನೆ ಒಡಯುವೆ.

ಕಟ್ಟುವ ಕೆಡೆಯುವ
ಈ ಕಣ್ಣು ಮುಚ್ಚಾಲೆ
ಇನ್ನು ಸಾಕು
ನೀನೊಲಿದ ಗಳಿಗೆ
ಅನಂತತೆಗೆ ಬೆಳೆಯುವುದು ಬೇಕು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅದು ಎಲ್ಲಿಯುದು ಸಾವಯವ ?
Next post ಯಾಕೆ?

ಸಣ್ಣ ಕತೆ

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

cheap jordans|wholesale air max|wholesale jordans|wholesale jewelry|wholesale jerseys