ಅವಸರ ಬೇಡ

ಬವಣೆಯ ಬದುಕು
ಭರವಸೆಯಲಿ ಸವೆಸುತ್ತಾ
ದುಡಿಮೆಯಲಿ ಕಾಲ ಕಳೆಯುತ್ತಾ
ತಿನ್ನುವ ಅನ್ನವ ತೊರೆದು
ಹೊರಟೆಯೇನಣ್ಣ ಆತ್ಮಹತ್ಯೆಗೆ
ಆತುರಬೇಡ… ಅವಸರಬೇಡ
ನಿನ್ನ ಒಡಲ ಕುಡಿಗಳಿಹರು
ಆತಂಕಬೇಡ ನಾವಿರುವೆವು ನಿಮಗಾಗಿ

ಹಸಿವೆ.. ಹರಿ ಹಾಯ್ದರೂ…
ನಾವೆಲ್ಲಾ… ಒಂದೊತ್ತಿನ
ಉಣ್ಣುವ ಊಟವು ಬಿಟ್ಟು
ಮೇಘನ ಮೇಲೆ ಆಣೆಯಿಟ್ಟು
ಬೇಡೋಣ ಭೂತಾಯಿ ಒಲವಿಗೆ
ಆತಂಕಬೇಡ ನಾವಿರುವೆವು ನಿಮಗಾಗಿ

ಹೋಗಿಯೇ… ಬಿಡಲಿ
ಅನುಕಂಪವಿರದೆ ಈ ದೇಹದ
ಆ ಒಂದು ಕ್ಷಣ ಉಸಿರು…
ಆಗಲಿ ಆವಾಗಲಾದರೂ
ಭೂಮಡಿಲ ಒಡಲು ಹಸಿರು
ಆತಂಕಬೇಡ ನಾವಿರುವೆವು ನಿಮಗಾಗಿ

ಬದುಕು ಬರಿ ಬರವಲ್ಲ
ಸುಡು ಬಿಸಿಲಿನಿ ಸಿಡೆಲೆಯಾದರೂ
ಬಿಡಲು-ಕೈಬಿಡಳು ಭೂಮಾತೆ
ತನ್ನ-ಕುಡಿಗಳಾಗಿರುವ…
ನಮ್ಮೆಲ್ಲರನ್ನೂ…. ಪೊರೆದವಳು
ಆತಂಕಬೇಡ… ನಾವಿರುವೆವು ನಿಮಗಾಗಿ

ಬೆಂಕಿ ಉಂಡೆಯ ಝಳದಲ್ಲೂ
ತಂಪನೆಯ ತಂಗಾಳಿ ಕಾಣುತ
ಮೈಕೊರೆವ ಮಾಗಿ ಚಳಿಯಲ್ಲೂ
ಬೆಚ್ಚಗಿನ ಬದುಕು ಅರಸಿದವರು
ಆತಂಕಬೇಡ… ನಾವಿರುವೆವು ನಿಮಗಾಗಿ

ಬಿಸಿಲು-ಗಾಳಿ-ಮಳೆಯೆನ್ನದೆ
ಮೈ-ಕೈ ಒಡ್ಡಿ ಮುದಡದ
ಬೆಳೆದು… ಬಾಳಿದವು…
ನನ್ನೂರಿನ ಹೆಮ್ಮೆಯ ಸಿರಿಯುಳ್ಳ
ನಾಡಿನ ಸಾರ್ವಭೌಮರು ನೀವು
ಆತಂಕಬೇಡ… ನಾವಿರುವೆವು ನಿಮಗಾಗಿ

ಬಿಡುವದಿಲ್ಲ… ನಾವು…
ಶರಣಾಗಲು ಸಾವಿಗೇ ನೀವು
ಬರದ ಬೇಗೆಯ ಹಲವು
ವೃಷ್ಟಿ-ಅನಾವೃಷ್ಟಿಗಳೇ ಮುತ್ತಲಿ
ಆತಂಕಬೇಡ ನಾವಿರುವೆವು ನಿಮಗಾಗಿ

ಬೆಂಕಿ ಉಗುಳುತ ಚೆಲ್ಲಲಿ
ಧರೆಯೆ ದಹಿಸುತಲಿ…
ಎದೆಗುಂದಿ… ತಲೆಬಾಗದೆ
ಧೈರ್ಯ ಒಂದೆ ಸರ್ವಸಾಧನೆ
ಮೇರು ಸವಾಲು ಸ್ವೀಕಾರವಿರಲಿ
ಆತಂಕಬೇಡ ನಾವಿರುವೆವು ನಿಮಗಾಗ….

ಬದುಕು-ಗೆಲ್ಲುತಲಿ
ಜಗವೆಲ್ಲಾ ಗೆಲ್ಲಿರಿ…
ಆತ್ಮಹತ್ಯೆಯ ಆಲಿಂಗನದಿ
ಬಡತನದ ಭೂತಕ್ಕೆ ಬೆದರಿ
ಮರೀಚಿಕೆ ಸವಾರಿಬೇಡ
ಆತಂಕಬೇಡ… ನಾವಿರುವೆವು
ನಿಮಗಾಗಿ ಸದಾ… ನಿಮಗಾಗಿ

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅನುರಾಗ
Next post ಸಾವಿರಪದ ಸರದಾರ

ಸಣ್ಣ ಕತೆ

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

cheap jordans|wholesale air max|wholesale jordans|wholesale jewelry|wholesale jerseys