ಕಾಲೇಜು ವಿದ್ಯಾರ್ಥಿ

ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿ ನಾನು
ಯಾವುದೋ ಒಂದು ತರಗತಿಯಲ್ಲಿ ಓದುತ್ತಿದ್ದೇನೆ.
ಅಲ್ಲ ಅಲ್ಲ
ಯಾವುದೋ ಒಂದು ತರಗತಿಯಲ್ಲಿ ಇದ್ದೇನೆ.
ಅದೂ ಅಲ್ಲ
ಯಾವುದೋ ಒಂದು ತರಗತಿಯಲ್ಲಿ ನನ್ನ ಹೆಸರಿದೆ.

ತರಗತಿಗೆ ಹೋಗಲು ನನಗೆಲ್ಲಿ ಸಮಯ?
ಕಾಲೇಜಿಗೆ ಬಂದರೆ ನೂರಾರು ಕೆಲಸ
ಹತ್ತಾರು ಸಂಘಗಳ ಸದಸ್ಯನಾನು
ನಾಲ್ಕಾರು ಸಂಸ್ಥೆಗಳ ಕಾರ್ಯದರ್ಶಿ ನಾನು
ಮತ್ತೊಂದು ಪಾರ್ಟಿಯ ಅಧ್ಯಕ್ಷನೇ ನಾನು!

ಕಾಲೇಜಿಗೆ ಬಂದೆ, ಪ್ರಿನ್ಸಿಪಾಲರ ಕಂಡೆ,
ನನ್ನೆಲ್ಲ ವಿಷಯಗಳ ಬಗ್ಗೆ ಮಾತನಾಡಿದೆ,
ಉಳಿದೆಲ್ಲ ಶಿಕ್ಷಕರ ಬಳಿ ಹೋಗಿ ಬಂದೆ,
ಎಷ್ಟೆಲ್ಲ ವಿಷಯಗಳ ಚರ್ಚಿಸಿ ಬಂದೆ
ನಾಲ್ಕಾರು ಗೆಳೆಯರೊಡನೆ ಹರಟುತ್ತಾ ನಿಂತೆ.
ಸಂಗೀತ, ನಾಟಕ, ನೃತ್ಯಗಳ ಬಗ್ಗೆ,
ಚುನಾವಣೆ, ಗ್ರಂಥಾಲಯ, ವಾಚನಾಲಯಗಳ ಬಗ್ಗೆ
ಫ್ರ್‍ಈಶಿಪ್ಪು, ಸ್ಕಾಲರ್‌ಶಿಪ್ಪು, ಲೋನುಗಳ ಬಗ್ಗೆ,
ಭಾಷಣ, ಬಹುಮಾನ, ಸನ್ಮಾನಗಳ ಬಗ್ಗೆ,
ಎನ್ನೆಸ್ಸೆಸ್, ಎನ್ಸೀಸಿ, ಸ್ಪೋರ್ಟುಗಳ ಬಗ್ಗೆ
ಕ್ರಿಕೆಟ್ಟು, ಫುಟ್ ಬಾಲು, ಟೆನ್ನಿಸುಗಳ ಬಗ್ಗೆ
ಗ್ರೂಪ್ ಸಾಂಗ್ಸು, ಗ್ರೂಪ್ ಡಾನ್ಸುಗಳ ಬಗ್ಗೆ
ಏನೆಲ್ಲ ಚಿಂತೆಯು ಎನಗೆ
ವರ್ಷವಿಡೀ ಇರುವುದು ಕಾರ್ಯ ನನಗೆ.

ಜುಲೈನಲ್ಲಿ ಕಾಲೇಜಿಗೆ ಸೇರಿದರೆ ಆಯ್ತು
ಆಗಸ್ಟ್‌ನಲ್ಲಿ ಚುನಾವಣೆಗಳು, ನಾಟಕಗಳು,
ಸೆಪ್ಟೆಂಬರ್‌ನಲ್ಲಿ ತಪ್ಪದೆ ವಾರ್ಷಿಕ ಮುಷ್ಕರ
ಅಕ್ಟೋಬರ್‌ವನ್ನೆಲ್ಲ ರಜದಲ್ಲಿ ಕಳೆದು
ನವೆಂಬರ್‌ನಲ್ಲಿ ಅವಸರದ ಪ್ರವಾಸ ಹೋಗಿ ಬಂದು,
ಡಿಸೆಂಬರ್‌ನಲ್ಲಿ, ನವೆಂಬರ್‌ನ ರಾಜ್ಯೋತ್ಸವ ಮಾಡಿ,
ಜನವರಿಯಲ್ಲಿ ಕ್ರೀಡಾಕೂಟ, ವಾರ್ಷಿಕೋತ್ಸವ ಮಾಡಿ
ಫೆಬ್ರವರಿಯಲ್ಲಿ ಸ್ಪೆಷಲ್ ಕ್ಲಾಸುಗಳ ಚಂಡಿ ಕಾಡಿ
ಮಾರ್ಚ್‌ನಲ್ಲಿ! ಓ ಭಯವಾಗುತಿದೆ ಎನಗೆ
ಭೂತ ಬಂತು ನೋಡಿರಲ್ಲಿ. “ಪರೀಕ್ಷೆ”!
*****
೧೨-೦೧-೧೯೭೫

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೋಮು ಸೌಹಾರ್ದದ ಸಂಕೇತ ಸ್ವಾಮಿ ವಿವೇಕಾನಂದ
Next post ನನ್ನವಳು

ಸಣ್ಣ ಕತೆ

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

cheap jordans|wholesale air max|wholesale jordans|wholesale jewelry|wholesale jerseys