ಶಬರಿಗೆ ಪತ್ರ

ಶಬರಿಕಾದಳಂದು ಶ್ರೀರಾಮ ಬರುವನೆಂದು,
ನಾನಿಂದು ಕಾದು ನೊಂದೆ ನಿನ್ನ ಪತ್ರ ಬರಲಿಲ್ಲವೆಂದು
ಕಾಯುವುದು ಬೇಯುವುದು ಅವರವರ ಕರ್ಮ
ಒಳಿತನಾಶಿಸಿ ಬಾಳುವುದು ಈಗೆಮ್ಮ ಧರ್ಮ.
“ತಾಳಿದವನು ಬಾಳಿಯಾನು” ಎಂಬುದೊಂದು ಗಾದೆ
ತಾಳಿ ತಾಳಿ ಸುಸ್ತಾದವನು ಈಗ ನಾನಾದೆ.
ಯಕ್ಷನಂತೆ ಕಾದೆ ನಿನ್ನ ಸಂದೇಶಕ್ಕಾಗಿ
ಪತ್ರ ಬರದ, ಶಬರಿಯಂತೆ ದುಃಖಿ ನಾನಾಗಿ.
ರಾಮಾಯಣ ಹಳೆಯ ಕಥೆ, ಕಾಲ ಪುರಾತನ,
ಈಗ ಅಣು ಯುಗ-ಜೆಟ್‌ನ ಕಾಲ, ವಿನೂತನ.
ಸಂದೇಶಕೆ ಮೋಡ ಬೇಡ, ಪತ್ರ ತರಲು ಪಕ್ಷಿ ಬೇಡ,
ಪ್ರೇಮ ಪಕ್ಷಿಯ ಸಂದೇಶಕೆ ಕೊನೆ ಮೊದಲೇ ಬೇಡ.
*****
೨೮-೧೨-೧೯೮೩

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜನಪದ ನಾಯಕ ಡಾ. ರಾಜಕುಮಾರ್
Next post ಹೂವು

ಸಣ್ಣ ಕತೆ

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

cheap jordans|wholesale air max|wholesale jordans|wholesale jewelry|wholesale jerseys