ತ್ಯಾಗ

ಮೊನ್ನೆ ಕಾಶಿಗೆ ಹೋಗಿದ್ದೆ
ಗಂಗೆಯಲ್ಲೊಂದು ಮುಳುಗು ಹಾಕಿ
ಕೋಪ ಬಿಟ್ಟು ಬಂದೆ!
ಬಡವನ ದವಡೆಗೆ ಮೂಲವಾದ
ಈ ಪ್ರಳಯಾಂತಕ ಕೋಪವನ್ನ
ಇಟ್ಟುಕೊಳ್ಳುವುದಕ್ಕಿಂತ
ಬಿಟ್ಟು ಬಿಡುವುದೇ ಮೇಲಲ್ಲವೇ ?
ಅಷ್ಟೇ ಅಲ್ಲದೆ, ಕೋಪ ಬಿಡುವುದು
ಅನಿವಾರ್‍ಯವೂ ಆಗಿತ್ತು!
ಮನೆಯಲ್ಲಾಗಲಿ, ಆಫೀಸಲ್ಲಾಗಲಿ
ಎಳ್ಳಷ್ಟೂ ಬೆಲೆಯಿಲ್ಲದ ಕೋಪ
ನನ್ನನ್ನೂ ತೊರೆಯಲಿ
ಯಾರಾದರೂ ದೊಡ್ಡ
ಅಧಿಕಾರಿಯನ್ನು ಆಶ್ರಯಿಸಲಿ
ಒಳ್ಳೆಯ ಬೆಲೆ ಪಡೆಯಲಿ.
*****
೨೫-೦೫-೧೯೯೩

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜಾತ್ಯತೀತತೆ : ಒಂದು ನೋಟ
Next post ಜನುಮದ ಜೋಡಿ

ಸಣ್ಣ ಕತೆ

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

cheap jordans|wholesale air max|wholesale jordans|wholesale jewelry|wholesale jerseys