ಸಾಮ್ರಾಜ್ಞಿ

ತುಂಬಿದ ಸಿರಿಯ ಸೊಬಗಿನಲಿ
ಗಿರಿವನ ಬೆಟ್ಟಗಳ ಹಸಿರಲಿ
ಕನ್ನಡದ ಗಡಿಯಲಿ
ಕನ್ನಡಮ್ಮನ ಅಳಲು ಆಲಿಸುವವರಿಲ್ಲ

ಮೆರೆಯಬೇಕಿದ್ದ ಸಾಮ್ರಾಜ್ಞಿ
ಬೆಂಡಾಗುತಿಹಳು ಬವಣೆಯಿಂದ
ಜೋಭದ್ರ ನಾಯಕಮಣಿಗಳನು
ಪಡೆದ ಕನ್ನಡನಾಡಿನ ಚಿತ್ರವ ಕಂಡು
ಕಣ್ಣೀರಿನ ಹೊಳೆ ಹರಿಸುತಿಹಳು

ಕಣ್ಣು ತೆರೆಯಿರಿ ಕನ್ನಡ ಕುವರರೆ
ಅಳಿಯುತಿಹ ಕನ್ನಡ ಉಳಿಸಿರಿ
ಪರಭಾಷೆಯ ದಳ್ಳುರಿಯ ಶಮನಗೊಳಿಸಲು
ಕಂಕಣಕಟ್ಟಿ ಸನ್ನದ್ಧರಾಗಿರಿ

ವೀರಾವೇಷದಿ ಬರಿ ಘೋಷಣೆ ಕೂಗುತಾ
ನಾಯಕರ ಪೊಳ್ಳು ಭಾಷಣ ಕೇಳುತಾ
ಮನನೊಂದು ಮಮ್ಮಲ ಮರಗುತಿಹಳು…

ಗಡಿ ನಾಡಿನ ಉದ್ದಕ್ಕೂ
ಝೇಂಕರಿಸುತಿಹುದು ಶೋಕಗೀತೆ
ವೇದನೆಯ ಶಮನಗೊಳಿಸುವಿರಾ
ತಾಯಿ ಎದುರನೋಡುತಿಹಳು
ಕನ್ನಡ ಕುವರರ ಶಕ್ತಿ-ಯುಕ್ತಿಗಳನು

***

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೃಷಿ
Next post ಕರುನಾಡು

ಸಣ್ಣ ಕತೆ

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

cheap jordans|wholesale air max|wholesale jordans|wholesale jewelry|wholesale jerseys