ನಿಂದಿಸದಿರು ನೀ ಕಾಲವನು

ನಿಂದಿಸದಿರು ನೀ ಕಾಲವನು
ವಿಧಿಯ ನೆಪಮಾಡಿ|
ದೂಷಿಸದಿರು ನೀ ಈ ಜನ್ಮವನು
ಹಿಂದಿನ ಕಾಲಕರ್ಮನು ಹಗೆಮಾಡಿ||

ಕಠಿಣ ಪರಿಶ್ರಮವಿಲ್ಲದೆ
ಬರಿಯ ಅದೃಷ್ಟವನೇ ನಂಬಿ
ಬದುಕಲು ಸಾದ್ಯವೇನು?|
ಬಿಲ್ಲನೆತ್ತಿ ಬಾಣವ ಹೂಡದೆ
ಬರೀ ಠೇಂಕರಿಸಿದರೆ
ಗುರಿಯತಲುಪಲು ಸಾಧ್ಯವೇನು?||

ಉತ್ತಿ ಬಿತ್ತಿ ಬೆಳೆಸಿ ಇನ್ನೇನು ಫಲ
ಬಂದೇಬಿಟ್ಟಿತು ಎನ್ನುವಷ್ಟರಲ್ಲಿ ಮಳೆಹೋಗಿ
ಕೈಯಿಗೆ ಬಂದ ತುತ್ತು ಬಾಯಿಗೆ ಬಾರದಿರುವಾಗ|
ದುಡಿದು ಶ್ರಮವಹಿಸಿ ಗಳಿಸಿದರೂ
ದಕ್ಕುವದೇ ದುರ್ಲಭವಾಗಿರುವಾಗ|
ದುಡಿಯದಲೇ ಬಯಸಿದರೆ ಭಾಗ್ಯವ
ಬರಲದುವೇ ತಾತನ ಮನೆಯ ಸ್ವತ್ತೇ?||

ಬೆವರಿಳಿಸಿ ಬಸವಳಿದು ಭೂತಾಯಿಯ
ಸೇವೆಮಾಡಿದರೂ ತುತ್ತು ಅನ್ನಕೆ
ಅದೆಷ್ಟೋ ದಿನ ಕಾಯಬೇಕು|
ಅಂತದರಲಿ ನೀ ಕೂತಲ್ಲಿ ಎಲ್ಲವನು
ಬಯಸಿ ಬೇಸರಿಸಿದರೆ
ನಿನ್ನಕಡೆ ನೋಡುವರಾರು?
ಬಿಡು ಚಿಂತಿಸುವುದನು
ಬಿಡು ಕಾಲ, ಕರ್ಮವ ನಿಂದಿಸುವುದನು|
ನಡೆಮುಂದೆ ಕಾಲ ದಾರಿತೋರಿದೆಡೆ
ಮುಂದಿರದು ಭಯದ ಅಡೆತಡೆಯ ಗೋಡೆ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭಗ್ನ ಹೃದಯಿ
Next post ನರಜನ್ಮ

ಸಣ್ಣ ಕತೆ

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

cheap jordans|wholesale air max|wholesale jordans|wholesale jewelry|wholesale jerseys