ಇಷ್ಟವಿಲ್ಲದಿದ್ದರುನೂ

ಇಷ್ಟವಿಲ್ಲದಿದ್ದರುನೂ
ನಮ್ಮ ಮಕ್ಕಳನ್ನು
ಇಂಗ್ಲೀಷ್ ಶಾಲೆಗಳಿಗೆ
ಸೇರಿಸುತ್ತಿದ್ದೇವೆ |
ಹೆಂಡತಿಯ ಒತ್ತಾಯಕ್ಕೋ,
ನೆರೆಮನೆಯವರ ಅಹಿತಕರ
ಜೀವನ ಸ್ಪರ್ಧೆಗೋ ಅಥವಾ ನಾವು
ಹೆಚ್ಚೆಂದು ತೊರಿಸಿಕೊಳ್ಳಲೋ||

ವಾಸ್ತವದಲಿ ಕಠಿಣವೆನಿಸಿದರೂ
ಕೈಯಲ್ಲಿ ಕಾಸಿಲ್ಲದಿದ್ದರೂ
ಹೇಗೋ ಹೆಣಗಾಡಿ ಜೀವತೇಯ್ದು
ಮಕ್ಕಳಿಗೆ ಶಿಕ್ಷಣಕೊಡಿಸಲು
ಇಡೀ ಜೀವಮಾನ ಮುಡಿಪಾಗಿಡುತ್ತೇವೆ|
ಇನ್ನು ಇದೆಲ್ಲದರ ಜೊತೆಗೆ
ವಸತಿಯುಕ್ತ ಅಂತರಾಷ್ಟ್ರೀಯ ಶಾಲೆಯ
ಅಂಧ ವ್ಯಾಮೋಹ
ಅಲ್ಲಿಗೆ ಸೇರಿಸಲು ದುಂಬಾಲು|
ಇದರ ಪರಿಣಾಮ ಮಕ್ಕಳಿಗೆ ಪೋಷಕರ
ಪ್ರೀತಿ ವಾತ್ಸಲ್ಯ ಕೊರತೆ, ಒಂಟಿತನ||

ವಿದ್ಯೆಯ ಮೂಲ ಉದ್ದೇಶವಾದರೂ ಏನು?
ಜ್ಞಾನ, ವಿಜ್ಞಾನ, ಸುಶಿಕ್ಷಣ,
ಸಂಸ್ಕಾರ, ಇತಿಹಾಸ ಹಾಗೂ
ನಮ್ಮ ದೇಶ ಭಾಷೆಯ ಶ್ರೀಮಂತಿಕೆ ಅಧ್ಯಯನ|
ಆದರೆ ಅದು ಆಗುತ್ತಿದೆಯೇ?
ಆದರೂನು ಅದು ಅನ್ಯ ಭಾಷೆಯಲ್ಲಿ
ಕಲಿಸಿದರೆ ಅದೆಷ್ಟು ಪರಿಪೂರ್ಣ?
ಇದನ್ನೇ ಮಾತೃ ಭಾಷೆಯಲ್ಲಿ ಸುಲಲಿತವಾಗಿ
ಮಕ್ಕಳಿಗೆ ಹೊರೆಯಾಗದಂತೆ|
ಕಡಿಮೆ ಕರ್ಚಿನಲ್ಲಿ ಎಲ್ಲರಿಗೂ
ಕೈಗೆಟುಕುವ ಬೆಲೆಯಲ್ಲಿ
ಮಾಡಿದರೆಷ್ಟು ಚೆನ್ನ|
ಇದಲ್ಲವೇ ಕನ್ನಡ ಉಳಿಸಿ ಬೆಳೆಸಿ
ಶ್ರೀಮಂತಗೊಳಿಸುವ ಮಾರ್ಗ||

ಅಂತಿಮವಾಗಿ ಹೊಟ್ಟೆಹೊರೆಯಲು
ಎಷ್ಟು ವಿದ್ಯೆ ಬೇಕು? ಪ್ರಪಂಚದ ಎಲ್ಲಾ
ವಿದ್ಯೆಯನ್ನು ಒಬ್ಬರೇ ಕಲಿತು,
ಒಬ್ಬನೇ ಎಲ್ಲಾ ಕೆಲಸ ನಿರ್ವಹಿಸಲು ಸಾಧ್ಯವೇ?|
ಎಲ್ಲರು ಅವರವರ ಯೋಗ್ಯತಾನುಸಾರ
ಕೈಲಾಗುವದನ್ನು ಮಾಡಿದರೆ
ಲೋಕಕಲ್ಯಾಣ ಸಾಧ್ಯ|
ರಾಷ್ಟ್ರಮಟ್ಟದಲಿ ಅತೀ ಹೆಚ್ಚು
ಹೆಸರು ಮಾಡಿರುವವರೆಲ್ಲರೂ
ಮಾತೃ ಭಾಷೆಯಲ್ಲಿ ಹಾಗೂ
ಸರ್ಕಾರಿ ಶಾಲೆಯಲ್ಲಿ ಕಲಿತವರೇ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೋಳಿ ಕಣ್ಣೀರು
Next post ಅವತಾರಿ

ಸಣ್ಣ ಕತೆ

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

cheap jordans|wholesale air max|wholesale jordans|wholesale jewelry|wholesale jerseys