ಜೀವನತೆರೆ

ಜೀವನವೆಂಬ ಸಾಗರದಲಿ
ಕಾಣದ ನಾವಿಕನಾಶ್ರಯದಿ
ಪಯಣಿಸುವ ಪಯಣಿಗರು
ಪ್ರಯಾಸ-ಪರಿಶ್ರಮದಲಿ…
ದೃಢ-ವಿಶ್ವಾಸಗಳ ಹುಟ್ಟುಗೋಲಾಡಿಸುತ
ನಿರ್ಭೀತಿ-ನಿರ್ಲಿಪ್ತತೆ… ಹೊರದೂಡುತ
ಗೆಲುವನು ದೂರದಲಿ ಕಾಣುತ…
ಧೈರ್ಯದ ಸವಾರಿಯಲಿ ನಡೆಯುವಾ

ನಿರಾಶೆಯ ತೆರೆಗಳ ತಳ್ಳುತ…
ಆಶಾ-ಹಕ್ಕಿಗಳಾಗಿ ಹಾರುತ
ಬಯಕೆಯ ಬಾನಲಿ ತೇಲುತ
ಸಾಗೋಣ ದಡ ಸೇರುವ ಗುರಿಯಲಿ

ಜೀವನವು ಸಂಘರ್ಷಗಳ ತಾಣ
ಅವಿರತ ಹೋರಾಟದ ಕಣ
ದಿಟ್ಟತನದ ಬಾಳಲ್ಲಿ…
ಸೋಲು ಸವಾಲಾಗಿಸುತ
ಎದ್ದೇಳುವ ಕಲೆ ರೂಢಿಸುತ
ಸೌಹಾರ್ದತೆಯ ಸಮಬಾಳಲಿ
ಅರಳೋಣ-ಮಿಂದು ಬೆಳಗುತಲಿ

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆ ಡಂಗುರ – ೯
Next post ನಗೆ ಡಂಗುರ – ೧೦

ಸಣ್ಣ ಕತೆ

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

cheap jordans|wholesale air max|wholesale jordans|wholesale jewelry|wholesale jerseys