ಉದಯಾಚಲದಲಿ ಮೂಡಿದ ಸೂರ್ಯ

ಉದಯಾಚಲದಲಿ ಮೂಡಿದ ಸೂರ್ಯ
ಹಿಡಿದನು ಕನ್ನಡ ಬಾವುಟವ
ಹಾರಿದ ಹಕ್ಕಿಗಳೆಲ್ಲವು ಮೊರೆದವು
ಕನ್ನಡ ನಾಡ ಗೀತವ ||

ಓಡುವ ನದಿಗಳು ಕಲಕಲ ರವದಲಿ
ನಲಿಸಲಿ ಕರುನಾಡ
ಹೆಜ್ಜೆಯ ಹಾಕಿದ ಪಚ್ಚನೆ ಪಯಿರು
ಮೆರೆಸಲಿ ಸಿರಿನಾಡ
ಪಡುವಣ ತೀರದ ಸಹ್ಯಾದ್ರಿಯ ಸಿರಿ
ಸ್ಫೂರ್ತಿಯ ಸೆಲೆಯಾಗಿ
ಉಳಿಸಲಿ ಬೆಳೆಸಲಿ ಕನ್ನಡ ಸತ್ವವ
ಚಿರನೂತನವಾಗಿ

ಸುರಿಯಲಿ ಎಲ್ಲೂ ಕನ್ನಡದಾ ಮಳೆ
ಸ್ವಾತಿಯ ಮುತ್ತಾಗಿ
ತೊನೆಯಲಿ ಎಲ್ಲೆಡೆ ಭ್ರಾತೃತ್ವದ ಬೆಳೆ
ಉಸಿರು ಉಸಿರಾಗಿ
ಮೊಳಗಲಿ ಎಲ್ಲೆಡೆ ಕನ್ನಡ ಸ್ವರಗಳು
ಸರಿಗಮ ಪದವಾಗಿ
ಬೆಳೆಯಲಿ ಸರ್ವರ ಹೃದಯ ತೋಟದಲಿ
ತರು ಲತೆ ಒಂದಾಗಿ

ಏರಲಿ ಮುಗಿಲಿಂದಾಚೆಗೆ ಹಾರಲಿ
ಕನ್ನಡ ಬಾವುಟವು
ಸೂರ್ಯನ ಮೀರಿದ ಗ್ರಹತಾರೆಗಳು
ಸೂಸಲಿ ಸ್ವಾಗತವು
ಕನ್ನಡ ಕನ್ನಡ ಐಸಿರಿಗನ್ನಡ
ಎಂದೂ ಚೇತನವು
ಕನ್ನಡ ನುಡಿಯಲಿ ತೇಲಿದ ಜೀವಿಯ
ಬದುಕು ಪಾವನವು

ಕಸ್ತೂರಿಯಲಿ ಮೈತಳೆದ ಸಿರಿ
ನಮ್ಮೀ ಕನ್ನಡವು
ಬಿಟ್ಟರೆ ಬಾಯಿ ಕವಿತೆಯು ಅಲ್ಲಿ
ಎಂಥಾ ಸೋಜಿಗವು
ಸುಂದರ ಕನ್ನಡ ನಾಡನು ಹೊತ್ತ
ಭೂಮಿ ಸಾರ್ಥಕವು
ಇಂತಹ ನಾಡನು ನೋಡದ ಮಂದಿಯ
ಜನ್ಮ ನಿರರ್ಥಕವು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜೋತಿಷ್ಯ
Next post ಹಸಿವು ೨

ಸಣ್ಣ ಕತೆ

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

cheap jordans|wholesale air max|wholesale jordans|wholesale jewelry|wholesale jerseys