ಕಾಲಿಗೆ ಕಟ್ಟಿದ ಗುಂಡು

ಕಾಲಿಗೆ ಕಟ್ಟಿದ ಗುಂಡು – ಸಂಸಾರ
ಕೊರಳಿಗೆ ಕಟ್ಟಿದ ಬೆಂಡು – ಪಗಾರ
ತೇಲಲೀಯದು ಗುಂಡು
ಮುಳುಗಲೀಯದು ಬೆಂಡು
ಇದರ ನಡುವೆಯೇ ನೀನು
ಬದುಕಿದೆಯಾ ಬಡಜೀವ //ಪ//

ಕಾಲಿಗೆ ತೊಡರಿದ ಬಳ್ಳಿ
ಆಕರ್ಷಣೆಯ ಫಲಿತ
ನಂತರ ಇಲ್ಲ ವಿಮೋಚನೆ
ತಪಸ್ಸಿಗೂ ಸಹಿತ
ಬುದ್ಧಿವಂತರು ಕೂಡ
ಎಡವಬೇಕು ಒಮ್ಮೆ
ಕಾಲಿದ್ದ ಮೇಲೆ ನಡಿಗೆ
ಅದೇ ಸಹಜ ಒಲುಮೆ

ಕವಿ ಮತ್ತು ವೇದಾಂತಿ
ಎತ್ತು ಮತ್ತು ಕೋಣ
ಎತ್ತು ಏರಿಗೆ ಕೋಣ ನೀರಿಗೆ
ನಡುವೆ ನಿನ್ನ ಪ್ರಾಣ
ಬದುಕಿರಲಿ ಹೇಗಾದರೂ
ನೀನಂತೂ ಇಲ್ಲಿ ಹಾಜರಿ
ಮುಟ್ಟದಿದ್ದರೆ ದಡವ
ಖಾತರಿ ನಿನಗೆ ಗುಜರಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಿಂತವರು
Next post ನಮ್ಮನ್ನು ದೂರುವುದು ಯಾವ ನ್ಯಾಯ

ಸಣ್ಣ ಕತೆ

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

cheap jordans|wholesale air max|wholesale jordans|wholesale jewelry|wholesale jerseys