ನಾನು ಇನ್ನೊಮ್ಮೆ ಮರಳಿ ಬರುವಾಗ
ಬದುಕಿನ ಯಾವದಾದರೂ ಒಂದು ತಿರುವಿನಲ್ಲಿ
ಸತ್ಯವತಿಯಾಗಿ ಸತಿಯಾಗಿ
ನೀನು ಖಂಡಿತ ನನಗೆ ಸಿಕ್ಕುತ್ತಿ
ಹಳೆ ಪರಿಚಯ ಉಕ್ಕಿ ಬಂದು
ಮನದಲ್ಲಿ ಬಿಕ್ಕುತ್ತಿ
ಆಗ ನಿನ್ನ ವದನತುಂಬ
ವಿರಹದ ನೋವಿನ ಗೆರೆಗಳನ್ನು
ಬಿಸಿಯುಸಿರಿನಲ್ಲಿ
ಪಾಪಪ್ರಜ್ಞೆಯ ಬರೆಗಳನ್ನು
ನೋಡುವ ಇಚ್ಛೆ ನನಗಿರದು
ಅವೆಲ್ಲ ಹಿಂದೆ ನಡೆದ ಅಪರಾಧಗಳು
ಪ್ರೀತಿ-ನೀತಿಯಿರದ
ದಾಹ-ಮೋಹದ ಮಿಲನದಿಂದಾದ
ಪ್ರಮಾದಗಳು.
ಅವುಗಳಲ್ಲಿ ನಂಬಿಕೆ ನಿನಗೂ ಇರದು.
ಬಯಸಲಿಲ್ಲವೆ ನೀನು ರಾಣಿಯ ಪಟ್ಟ
ಹೊರಿಸಲಿಲ್ಲವೆ ಪರಿಪರಿಯ ಆಣೆಗಳ ಬೆಟ್ಟ
‘ಬೇಡುವುಡೆ ನೀವೆನ್ನ ಅಯ್ಯನಂ ಬೇಡಿ’ರೆಂದು
ನಾಚಿ ನನಗೆ ಹುಚ್ಚು ಹಿಡಿಸಲಿಲ್ಲವೆ,
ಆಗಲೆ ತಿಳಿಯಬೇಕಿತ್ತು
ನಿನ್ನಂತರಂಗದ ಹೋರೆಯನು
ಕಾಮ-ಪ್ರೇಮದ ಮೇರೆಯನು
ಗಂಡು ಎಂದೆಂದೂ ಹೆಣ್ಣಿಗೆ ಸೋತಿದ್ದಾನೆ
ಅಂತ-ದುರಂತಕ್ಕೆ ಬಲಿಯಾಗಿದ್ದಾನೆ
ಅದಕೆಂದೆ ನುಡಿವೆ
ಸಿಕ್ಕಿದರೆ ನೀನು ‘ಹಲೋ’ ಎಂದು ತೆರಳು
ತಡೆಯದಿರು, ನುಡಿಯದಿರು
ಮತ್ತೊಮ್ಮೆ ಕನ್ನೆಯಾಗಿ
ನನ್ನೆದುರು ಸುಳಿಯದಿರು
ನಾನು ಮತ್ತೊಮ್ಮೆ ಮಂಕಾಗಿ
ಮುಂದಿನ ಭಾರತಕ್ಕೆ ಕಾರಣವಾಗಲಾರೆ.
*****
Related Post
ಸಣ್ಣ ಕತೆ
-
ಇರುವುದೆಲ್ಲವ ಬಿಟ್ಟು
ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…
-
ಅಜ್ಜಿ-ಮೊಮ್ಮಗ
ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…
-
ಸಾವು
ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…
-
ಬಸವನ ನಾಡಿನಲಿ
೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…
-
ವಿಷಚಕ್ರ
"ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…