ದಿನವಿಡೀ
ಮೈಮನಗಳನ್ನು ದುಡಿಸಿ
ಗೋಲಾಕಾರದ ಶೂನ್ಯದೊಂದಿಗೆ
ಹೊರಲಾಗದ ಬೇಗುದಿಯನ್ನು
ಹೊರುತ್ತ
ಮನೆ ಮುಟ್ಟುವಾಗ
ಮನ ಮುಟ್ಟುವ ನಿನ್ನ
ಸ್ವಾಗತದ ಮುಸಿ ನಗೆಯಲಿ
ಪ್ರೇಯಸಿಯ ಕಾತುರವನ್ನು ಕಂಡು
ರಿಕ್ತ ಕರವನ್ನು ನಿನ್ನ ನಡುವಿನ ಸುತ್ತ ಬಳಸಿ
ಹತ್ತಿರಕ್ಕೆ ಎಳೆಯುತ್ತ
ಸೋಫಾಗೆ ಒರಗಿ ಕಾಲು ಚಾಚಿ
ನಿನ್ನ ಸುಂದರ ನಯವಾದ
ಘನ ಹೆರಳನ್ನು ಬಿಡಿಸಿ ಹರಡಿ
ಅದರ ಮೇಲೆ ಕದಪನಿರಿಸಿ
ದುಮ್ಮಾನವನ್ನು ಹೊರಹಾಕುವ
ನಿನ್ನ ನಾಜೂಕು ಬೆರಳುಗಳಲ್ಲಿ
ನನ್ನ ತತ್ವರ ಬೆರಳುಗಳು ಸೇರಿಕೊಂಡು
ತುಸು ಹೊತ್ತು ಕ್ರೀಡಿಸುವಾಗ
‘ಇಂದಿನ ಸುದ್ದಿಯೇನೆಂದು’
ನೀನು ಕೇಳುತ್ತಿ, ನಾನು
ದಾದರಿನವರೆಗೂ ನನ್ನ ಜೊತೆ
ಬಸ್ಸಿನಲ್ಲಿ ಕುಳಿತ
ಸುಂದರ ನೀರೆಯ
ತುಂಟ ವಿವರಗಳ ಜಾಲದಲ್ಲಿ ಮರೆತು
ಆಟದಲ್ಲಿ ಮಗ್ನ ಕರಗಳನ್ನು
ಎದೆಗೊತ್ತಿ
ಮನಸ್ಸನ್ನು ಹಗುರವಾಗಿಸುವ
ಉಸಿರನ್ನು ಬಿಡುತ್ತ
ಕಣ್ಣು ತೆರೆವಾಗ
ಎದುರಿನ ಕಿಟಕಿಯ ಜಾಲಿಯಿಂದ
ದೂರಕ್ಕೆ ಹರಡಿರುವ ಆಕಾಶ
ಕಾಣಿಸುತ್ತದೆ.
ಆಗ ಒಮ್ಮೆಲೆ ನೆಲ ಮುಗಿಲುಗಳ
ದಟ್ಟ ಅಂತರದ ಅರಿವಾಗಿ
ಮನಸ್ಸು ಒಳಗೆಳೆದುಕೊಂಡು
ಅಂತರವನ್ನು ಅಳೆಯುವ
ಸೀಮಾ ರೇಖೆಯನ್ನು
ಹುಡುಕ ತೊಡಗುತ್ತದೆ.
*****
Related Post
ಸಣ್ಣ ಕತೆ
-
ನಂಟಿನ ಕೊನೆಯ ಬಲ್ಲವರಾರು?
ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…
-
ತೊಳೆದ ಮುತ್ತು
ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…
-
ಮೌನರಾಗ
ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…
-
ಸ್ನೇಹಲತಾ
೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…
-
ರಾಮಿ
‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…