ಕಿರು ಪರಿಚಯ

ನಾನು ಯಾರೆಂದಿರಾ?
ನಾನು ಬುದ್ಧಿವಂತ
ಬುದ್ಧನ ಜಾತಿಯಲಿ ಹುಟ್ಟಿ
ಸಾರಸ್ವತ ಲೋಕವನು
ಕೈಯಿಂದ ತಟ್ಟಿ
ಜ್ಞಾನ ಭಂಡಾರವನು
ಗಂಟಾಗಿ ಕಟ್ಟಿ
ಅಜ್ಞಾನ ಅಂಧಕಾರವನು
ಹೆಮ್ಮೆಯಿಂದ ಮೆಟ್ಟಿ
ಪಡೆದ ಬುದ್ಧಿ ಸ್ವಂತ
ನಾನು ಬುದ್ಧಿವಂತ.

ಶಿಕ್ಷಕರ ಶಿಕ್ಷಿಸ ಬಲ್ಲೆ
ಪ್ರಿಂಸಿಪಾಲನ ಕ್ಯಾಬಿನ ಖಿಂಡಿಗೆ
ಕಲ್ಲು ಹೊಡೆದು ಕನ್ನಡಿ ಮುರಿಯ ಬಲ್ಲೆ
ಲ್ಯಾಬಿನಲ್ಲಿ ಸಿಲಿಂಡರಿ
ನ ದ್ರವಗಳ ಚೆಲ್ಲಿ
ಪ್ರಯೋಗ ನಡೆಸ ಬಲ್ಲೆ
ಪರೀಕ್ಷೆಯ ಹಾಲಿನಲಿ
ಅರ್ಧ ಗಂಟೆಯೆ ಕುಳಿತು
ಪಾಸಾಗ ಬಲ್ಲೆ
ಪಾಸಾಗದೆಯು ಮುಂದಿನ ಕ್ಲಾಸಿಗೆ
ಹೋಗ ಬಲ್ಲೆ
ವಿಶ್ವವಿದ್ಯಾಲಯಗಳು
ನನ್ನ ಅಂಕಿತದಲ್ಲಿ
ಮೂರು ವಿಷಯಗಳ ಮೇಲೆ
ಎಮ್ಮೆ ಕಟ್ಟಿ
ನನ್ನ ಹೆಸರಿನ ಮುಂದೆ
ಡಿಗ್ರಿಗಳ ಕಂತೆ ನಿಲ್ಲಿಸ ಬಲ್ಲೆ
ದೇಶದಲ್ಲಿ ನನ್ನ ಯೋಗ್ಯತೆಗೆ
ಸರಿಯಾದ ನೌಕರಿಯೆ ಕಡಿಮೆ
ಅದಕ್ಕೆಂದೆ ನನಗಿಲ್ಲ ದುಡಿಮೆ
ನಾನು ಸಾಧು ಸಂತ
ನಾನು ನಿರ್ಧನವಂತ.

ತರುಣರ ಗುಂಪಿಗೆ ನಾನು ನಾಯಕ
ಸಂಪು, ಗುಲ್ಲು ಗಲಾಟೆಗಳೆ ನನ್ನ ಕಾಯಕ
ಕ್ಯೂಮುರಿ, ಫ್ಲರ್ಟ್ ಮಾಡು
ಧೂಮಪಾನ, ಬೀರಕುಡಿ
ವುದು ನನ್ನ ನಿತ್ಯಮನರಂಜನೆಗಾಗಿ
ಇಂದ್ರಮಾಡಿದ್ದ. ಕೃಷ್ಣ ಆಡಿದ್ದ
ನಾನು ಭಾಗವತ, ವೇದಗಳ
ಓದಿರುವ ಬುದ್ಧಿವಂತ

ನಾನು ಅಜ್ಞಾನಿ ಅನಂತ.

ಕಸ್ಮೈದೇವಾಯ ಎಂಬ ಸವಾಲಿಗೆ
ಸವಾಲಾಗಿ ನೂರು ದೇವರ
ಸಮನಾಗಿ ಪೂಜಿಸ ಬಲ್ಲೆ
ಮಂದಿರ ಮಸೀದಿ ಚರ್ಚ್
ಸಾಯಿಬಾಬಾ, ಶಿರಡಿ ಬಾಬಾ
ರಜನೀಶ ಬ್ರಹ್ಮಚಾರಿ ಬಾಬಾ
ಎಲ್ಲಿರುವೆ ತಂದೆ ಬಾ. ಬಾ.
ಎನ್ನುತ
ಹರದಾರಿ ಹರಿದ್ವಾರಗಳ ಸುತ್ತಿ
ದೇವರ ಪತ್ತೆ ಹಚ್ಚಬಲ್ಲೆ.

ನಾನು ಸಾಹಿತಿ-ಕವಿ,
ದತ್ತಾಡಿಗ ಪುಟಪ್‌ಗಳ
ಕಾವ್ಯದ ಹಿಂಡುವೆನು ಕಿವಿ
ನಾಕು ತಂತಿಯಲಿ ಒಂದನು ಮುರಿದು
ರಾಮಾಯಣ ದರ್ಶನದ ಶಿಲ್ಪದ ಮೇಲೆ
“ಕಟ್ಟುವೆನು ನಾನು ಹೊಸನಾಡೊಂದನು
ರಸದ ಬೀಡೊಂದನು”
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಮ್ಮನ ಮಡಿಲನೇರಿ
Next post ಕೂಳ ಕೊಂಡು ತಂದರದು ಸಾವಯವವಾದೀತೇ ?

ಸಣ್ಣ ಕತೆ

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

cheap jordans|wholesale air max|wholesale jordans|wholesale jewelry|wholesale jerseys