ಸಂಕ್ರಾಂತಿ

ಸಗ್ಗದಿ… ಸಂಕ್ರಾಂತಿ
ಸಡಗರದಿ ಬರುತಿರೆ
ಸವಿಯ ಸಂಕೇತದಿ
ಎಳ್ಳು-ಸಕ್ಕರೆ ವಿನಿಮಯಿಸುತ್ತ
ಸಾಗೋಣ ಸರಸದಿ ಸೌಹಾರ್ದತೆಯಲಿ

ಮೇಲು-ಕೀಳು
ಭೇದಭಾವ ಮರೆತು
ಕ್ರಾಂತಿಯ ಸಂದೇಶ…
ಸಕಲರಿಗೂ ಸಾರುತಲಿ…
ಸಹಬಾಳ್ವೆಯಲಿ… ಸಾಗೋಣ.

ಜಲ-ನೆಲ-ಕಾಡಿನ
ರಕ್ಷಕರು ನಾವಾಗಿ
ಮೌಢ್ಯ.. ಸಂಪ್ರದಾಯಗಳ
ಸೆರೆಯಾಗದೆ… ನಾವುಗಳು
ನವೋದಯಕೆ ನಾಂದಿಯಾಗೋಣ

ಸಂಕ್ರಾಂತಿಯ ಸೌರಭದಿ
ಅರಳುತ ಬೆರೆಯೋಣ
ಶಾಂತಿ-ನೆಮ್ಮದಿ ಅಲೆಯು
ಎಲ್ಲೆಡೆ-ಹರಡುತ
ಸಮೃದ್ಧಿ-ಸಂಕೇತದಿ
ಸದಾ ಸಂಕ್ರಾಂತಿ ಬರುತಿರಲಿ

***

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚಂದದಿ ಕೇಳಿದರ ವಿಸ್ತಾರ
Next post ಬಾಸ್

ಸಣ್ಣ ಕತೆ

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

cheap jordans|wholesale air max|wholesale jordans|wholesale jewelry|wholesale jerseys