ಕೆಂಪು ದೀಪದ ಕೆಳಗೆ

ಹನ್ನೆರಡು ವರ್ಷದವಳಿದ್ದಾಗ,
ನನ್ನ ಮದುವೆ ಆಯಿತು.
ದಿನಾಲೂ ಆರು ಗಂಟೆಗೆ
ಎದ್ದು ಕೂಳು ಕುದಿಸಿ,
ಸೂರ್ಯ ಕಣ್ಣು ತೆರೆಯುವ ಮೊದಲೇ
ಭತ್ತ ಕೊಯ್ಯಲು ಹೋಗುತ್ತಿದ್ದೆ.
ಸಂಜೆ ತಂದ ಕೂಲಿಯೆಲ್ಲ
ಗಂಡ ಕಿತ್ತುಕೊಳ್ಳುತ್ತಿದ್ದ.
ಕುಡಿದು ಬಂದು
ಮನಬಂದಂತೆ ಬಡಿಯುತ್ತಿದ್ದ.
ಉಪವಾಸವಿದ್ದ ಹೊಟ್ಟೆ
ಮೇಲಿ೦ದ ಹೊಡೆತಗಳ
ಸಹಿಸಬೇಕಿತ್ತು.
ನಾನೇನೋ ಸಹಿಸಬಹುದು,
ಉಪವಾಸವಿರಬಹುದು
ಆದರೆ ನನ್ನ ಮಕ್ಕಳು
ಹಸಿವಿನಿಂದ ಬಳಲುವುದನ್ನು
ಸಹಿಸಲಸಾಧ್ಯವಾಗುತ್ತಿದ್ದು,

ದಿನದಿನಕ್ಕೆ ಬುದುಕು
ಸಂಕೀರ್ಣವಾಗುತ್ತಿತ್ತು,
ನನ್ನ ಶರೀರ ದಿನದಿನವೂ
ಯಾತನ ಶಿಬಿರವಾಗುತ್ತಿತ್ತು.
ಈಗ ನಾನು
ಪಾತ್ರೆ ತೊಳೆಯುತ್ತೇನೆ.
ಕಸ ಗುಡಿಸುತ್ತೇನೆ
ಬಟ್ಟೆ ಒಗೆಯುತ್ತೇನೆ.
ನಮ್ಮ ಮಾಲೀಕರ
ಮಕ್ಕಳನ್ನು ಆಡಿಸುತ್ತೇನೆ.

ಒಂದು ದಿನ –
ಅಂದು ಮಾಲೀಕರ
ಮನೆಗೆಲಸಕ್ಕೆ ಹೋಗಿದ್ದೆ,
ಮನೆಯ ಮಂದಿಯಲ್ಲ
ಸಿನಿಮಾಕ್ಕೆ ಹೋಗಿದ್ದರು,
ಮಾಲೀಕರು ನನ್ನ
ತಂದೆಯ ವಯಸ್ಸಿನವರು
ಅವರ ಮೇಲೆ ನನಗೆ
ಪೂರ್ಣ ವಿಶ್ವಾಸವಿತ್ತು.
ಆದರೆ ಅವರು ನನ್ನ ವಿಶ್ವಾಸವನ್ನು
ನುಚ್ಚು ನೂರಾಗಿಸಿದ್ದರು.

ಅದನ್ನು ಕಂಡ ಅವನ ಪತ್ನಿ
ನನ್ನನ್ನೇ ಹೊಡೆದು ದೂರಕ್ಕಟ್ಟಿದಳು
ಗಂಡನೂ ಮನೆಯಿಂದ
ದೂರ ಮಾಡಿದನು
ಅಂದಿನಿಂದ ಇಂದಿನವರೆಗೆ
ಈ ಕೆಂಪು ದೀಪದ
ಕೆಳಗೆ ಕುಳಿತು
ನನ್ನ ಮಕ್ಕಳು ಬರುವ
ದಾರಿ ನೋಡುತ್ತಿರುವೆ.
ಬದುಕಿನ ಕೊನೆಯ
ಅಂಚಿನಲ್ಲಿರುವ ಅವರು
ಈಗಲೂ ಬರುವುದಿಲ್ಲವೇನೋ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಹನೆ ಸಾಧನೆಗಳಿಲ್ಲದೆ ಸಾವಯವವೆಂತು?
Next post ಚೇಳು

ಸಣ್ಣ ಕತೆ

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

cheap jordans|wholesale air max|wholesale jordans|wholesale jewelry|wholesale jerseys