ದುರಂತ

ವರ್ಷಗಳೇ ಕಳೆದವು
ಭೂಪಾಲದ ಬಿಕ್ಕುಗಳು
ನಿಂತು ಹೋಗಲಿಲ್ಲ.
ರೋದನ ಶಾಂತವಾಗಲಿಲ್ಲ.
ಕಾರ್ಖಾನೆಗಳು ಉಗುಳಿದ
ಕಪ್ಪನೆಯ ವಿಷಗಾಳಿ
ಕೊಲೆಯಾಯ್ತು ಊರೆಲ್ಲಾ
ಸ್ಮಶಾನವಾಯ್ತು.

ರಹಸ್ಯ ರಾತ್ರಿಯಲಿ
ಕರಾಳ ಕೈಗಳು-
ಛಸನಾಲಾ ದುರಂತದ
ಗಣಿಯಿಂದ ಇಣುಕುತ್ತಿರುವ
ಅಸಹಾಯಕ ನೋಟಗಳು
ಬೇರುಗಳು ಪಸರಿಸಿ
ಆಳದಲ್ಲಿ ಹರಿಬಿಟ್ಟು
ಅಸನ್ಸೂಲ್ ಗಣಿಯಲ್ಲಿ
ಉಸಿರುಗಟ್ಟಿ ಬೆಂದುಹೋದ
ಸಮಾಧಿಯಾದ ಜೀವಗಳು
ಸಂಸ್ಕಾರವಿಲ್ಲದೇ
ಕೊನೆಯಾದ ದೇಹಗಳು

ಶ್ರಮಿಕರ ರಕ್ತದಿಂದ ತೋಯ್ದ
ಅಸ್ತಿಗಳನ್ನು ಬಚ್ಚಿಡುವುದೆಲ್ಲಿ?
ಪರಿಹಾರ ಕೊಡುವುದಿರಲಿ
ಆಸ್ತಿಯನ್ನು ದಕ್ಷಿಸಿಕೊಳ್ಳಲು
ಶವಗಳ ರಾಶಿಗಳ ಮೇಲೆ
ಶಾಪಗ್ರಸ್ತ ಅಹವಾಲುಗಳಿಗೆ
ಕೋರ್ಟಿನ ಚೌಕಟ್ಟಿನಲ್ಲಿ
ನ್ಯಾಯ ಹೇಗೆ
ಪಡೆಯುವಿರಿ ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಡು ಕೌತುಕವಲಾ? ಈ ಬಗೆಯ ಶರಣಾಗತಿ?
Next post ಟಚ್ ಇರಲಿ

ಸಣ್ಣ ಕತೆ

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

cheap jordans|wholesale air max|wholesale jordans|wholesale jewelry|wholesale jerseys