ಯಾಜ್ಞವಲ್ಕ್ಯನೂ ಮೃತ್ರೇಯಿಯೂ

ಯಾಜ್ಞವಲ್ಕ್ಯ ಹೇಳಿದ, ಮೈತ್ರೇಯಿಯ ಕರೆದು :
“ಕಾತ್ಯಾಯಿನಿಯೆಂದರೆ ಕಣ್ಣು ಮೂಗು ಮೊಲೆ
ತಲೆಯೆಂದರೆ ನಿನ್ನದೆ ! ಆದ್ದರಿಂದ
ಆತ್ಮವಿದ್ಯೆ ನಿನಗೇ
ಕಲಿಸುವೆ ನಾನು ಪ್ರತ್ಯಕ್ಷ.”

ನಗಾರಿಯೊಂದ ತರಿಸಿದ.
ಅದಕ್ಕೆ ಸರೀ ಬಾರಿಸಿದ.
ಅದರ ಸದ್ದು ಸುತ್ತಲೂ
ಗಿರಿಕಂದರ ವ್ಯಾಪಿಸಿತು.
ಹಕ್ಕಿಗಳೂ ಹಾರಿದುವು
ಕೋತಿಗಳೂ ಓಡಿದವು.
“ನೋಡಿದಿಯಾ!” ಎಂದ ಯಾಜ್ಞವಲ್ಕ್ಯ:
“ಎಲ್ಲಿಂದ ಹೊರಟಿತು, ಎಲ್ಲಿಗೆ ಹೋಯ್ತು ?
ಹಿಡಿವಂತಿಲ್ಲ ಕೈಯಲ್ಲಿ
ಕರೆವಂತಿಲ್ಲ ವಾಪಸು
ಆದರೂ-
ನಗಾರಿ ನಮ್ಮ ಕೈಯೊಳಗೆ !”
**

ಬೆಂಕಿಯೊಂದ ಮಾಡಿದ-ಅದಕ್ಕೆ
ಹಸೀ ಉರುವಲು ಹಾಕಿದ.
ಹೊಗೆ!

ಕಪ್ಪು, ಕಂದು, ನೀಲಿ
ಎಲ್ಲಾ ಕಡೆ ಹೊರಳಿ
“ನೋಡಿದಿಯಾ!” ಎಂದ ಯಾಜ್ಞವಲ್ಕ್ಯ:

“ಹೇಗೆ ಹಸೀ ಸೌದೆಯಿಂದ
ಹುಟ್ಟುತ್ತದೆ ಹೊಗೆ-ಹಾಗೆ
ಆತ್ಮದಿಂದ ಎಲ್ಲವೂ !”
**

ದೋಣಿಯೊಂದ ತರಿಸಿದ-ತಳಕ್ಕೆ
ಎರಡು ತೂತು ಕೊರೆಸಿದ.
ನೀರು ಒಳಕ್ಕೆ ಧಾವಿಸಿತು
ಮೊಗೆದಷ್ಟೂ ಮುಗಿಯದೆ.
ಈಜಿ ದಡ ಸೇರಿದರು.
“ನೋಡಿದಿಯಾ !” ಎಂದ ಯಾಜ್ಞವಲ್ಕ್ಯ
“ದೇಹವೆಂದವರೆ ಒಡಕು ದೋಣಿ
ನಂಬಿದವಗೆ ಗತಿಯಿಲ್ಲ–
ಆತ್ಮಜ್ಞಾನವೆಂದರೆ
ಅದು ಈಜಿನ ಹಾಗೆ !”
**

ಆರಗಿಣಿಯೊಂದ ತರಿಸಿದ
ಪಂಚವರ್ಣದ ಗಿಣಿ, ಸಣ್ಣ ಕಣ್ಣಿನ ಗಿಣಿ
ನೋಡಿದರೆ ಇನ್ನೂ
ನೋಡವೇಕೆಂಬ ಗಿಣಿ
ಹಾಡುವುದಕ್ಕೆ ಕಲಿಯಿತು
ವೇದಗಳ ಪಠಿಸಿತು
“ನೋಡಿದೆಯಾ!” ಎಂದ ಯಾಜ್ಞವಲ್ಕ್ಯ:
“ಹಾಡುತ್ತದೆ, ನುಡಿಯುತ್ತದೆ
ಮಾತ್ರ-
ಯಾಕೆ ಏನು ತಿಳಿಯದು.
ಆತ್ಮಜ್ಞಾನ ಇರದ ಹೊರತು
ಏನು ಹೇಳಿ ಏನು !”
**

ಹೇಂಟೆಯೊಂದ ತರಿಸಿದ
ಪ್ರತಿದಿನವೂ ತಿನಿಸಿದ.
ಬೆಳಗಿಂಜಾಮ ಕೂಗುತಿತ್ತು
ಎಲ್ಲರ ಎಬ್ಬಿಸುತಿತ್ತು
ಮಾತ್ರ-ಎಷ್ಟೇ ದಿನ ಕಳೆದರೂ
ಇಡಲಿಲ್ಲ ತತ್ತಿ
“ನೋಡಿದೆಯಾ!” ಎಂದ ಯಾಜ್ಞವಲ್ಕ್ಯ:
“ಆತ್ಮಕ್ಕೆ ಬೇಕು ಪರಮಾತ್ಮ
ಇಲ್ಲದೇ-
ದಕ್ಕಲಾರದು ಬ್ರಹ್ಮಾಂಡ !
**

ಮುಗಿಯಿತೇ ಎಂದಳು ಮೈತ್ರೇಯಿ
ಹೂಂ ಎಂದ ಯಾಜ್ಞವಲ್ಕ್ಯ.
ಒಂದು ಮಾತ್ರ ಮರೆತಿರೆಂದು
ಸೀರೆ ರವಿಕೆ ಬಿಚ್ಚಿದಳು
ಲಂಗ ಒದ್ದು ಜಾಡಿಸಿದಳು.
“ನೋಡಿದಿರಾ!” ಎಂದಳು ಮೈತ್ರೇಯಿ :
“ಸೀರೆಯೆಂದರಹಂಕಾರ
ರವಿಕೆ ತಪ್ಪು ಗ್ರಹಿಕೆ
ಬಾಡಿಯೆಂದರೆ ಕಿಲಾಡಿ
ಲಂಗ ಆಶಾಭಂಗ-ಇನ್ನು
ನೂರಕ್ಕೆ ನೂರು ಸಾಚಾ
ಆಗಬೇಕೆಂದರೆ ಇದೋ !” ಎಂದು
ಕಿತ್ಕೆಸೆದಳು ಕಾಚ !
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಿರಹ
Next post ಎಲ್ಲಿ ಹುಡುಕಲಿ

ಸಣ್ಣ ಕತೆ

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

cheap jordans|wholesale air max|wholesale jordans|wholesale jewelry|wholesale jerseys