ಎಲೆ ಚೆಲುವ ದುಂದುಗಾರನೆ

ಎಲೆ ಚೆಲುವ ದುಂದುಗಾರನೆ ಏಕೆ ವ್ಯಯಿಸುವೆ
ಪಡೆದ ಸ್ವತ್ತನ್ನೆಲ್ಲ ಬರಿದೆ ನಿನಗಾಗೇ?
ನಿಸ್ಪೃಹಳು, ಪ್ರಕೃತಿ ನೀಡುವುದೆಲ್ಲ ಸಾಲವೇ,
ಅದನು ಸಹ ನೀಡುವಳು ಕೇವಲ ಉದಾರಿಗೆ.
ಎಲೆ ಜಿಪುಣ ಚೆನ್ನಿಗನೆ ದಾನಮಾಡಲು ಇತ್ತ
ಭಾರಿ ಕೊಡುಗೆಯ ಹೀಗೆ ಹಾಳುಮಾಡುವೆ ಏಕೆ?
ಭೂರಿ ಸಂಪತ್ತು ಪಡೆದೂ ವ್ಯರ್ಥ ಶ್ರೀಮಂತ,
ಭಾರಿ ಹಣ ಬಳಸಿಯೂ ಬಾಳಲಾರೆ ಅದೇಕೆ?
ನಿನ್ನೊಡನೆ ನೀನೆ ವ್ಯವಹಾರ ನಡೆಸಲು ಹೀಗೆ
ನಿನಗೆ ನೀನೇ ಮೋಸ ಮಾಡಿಕೊಳ್ಳುವ ಪ್ರಿಯ ಒಲವೆ
ಪ್ರಕೃತಿ ನಿನ್ನನು ರಂಗದಾಚೆ ಕಳಿಸುವ ಗಳಿಗೆ
ಎಲ್ಲರೊಪ್ಪುವ ಯಾವ ಲೆಕ್ಕ ನೀ ಕೊಡುವೆ?
ನೀನು ಬಳಸದ ಚೆಲುವು ನಿನ್ನ ಜೊತೆ ಸಾಯುವುದು,
ಬಳಸಿದೆಯೊ ನಿನ್ನ ಸಂತತಿಯಲ್ಲಿ ಹಾಯುವುದು.
*****
ಮೂಲ: ವಿಲಿಯಂ ಷೇಕ್ಸ್‌ಪಿಯರ್
Sonnet 4
Lo in the Orient when the gracious light…

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೆಸಗರಹಳ್ಳಿ ರಾಮಣ್ಣ : ಸುಗ್ಗಿ-ಸಂಕಟಗಳ ಕತೆಗಾರ
Next post ದಾಖಲೆ

ಸಣ್ಣ ಕತೆ

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

cheap jordans|wholesale air max|wholesale jordans|wholesale jewelry|wholesale jerseys