ನನ್ನ ಕವಿತೆಗಳಲ್ಲಿ ನಿನ್ನ ಗುಣಗಳ ತಂದು

ನನ್ನ ಕವಿತೆಗಳಲ್ಲಿ ನಿನ್ನ ಗುಣಗಳ ತಂದು
ನಿಜ ಬಣ್ಣಿಸಿದ್ದರೂ, ಅದು ನಿನ್ನ ಘನತೆಯನು
ಅರ್ಧ ಮಾತ್ರವೆ ತೋರುವಂಥ ಸ್ಮಾರಕ ಎಂದು
ಸ್ವರ್ಗಕೇ ಗೊತ್ತಿದ್ದೂ ನಂಬುವರು ಯಾರದನು ?
ಆ ಕಣ್ಣ ಸೊಬಗ ಹಾಗೇ ಚಿತ್ರಿಸಿದರೂ,
ನಿನ್ನ ಘನತೆಯ ಕುರಿತು ಹೊಸ ಹೊಸತು ಬರೆದರೂ,
ಬರಲಿರುವ ಕಾಲ ಸಾರುವುದು – ಈ ನುಡಿ ಸುಳ್ಳು
ಇಂಥ ದೈವಿಕತೆ ಇರಲಿಲ್ಲ ಮನುಜರಲೆಂದೂ.
ದಿನ ಹೋಗಿ ಹಳದಿ ತಿರುಗಿದ ನನ್ನ ಪುಟಗಳನು
ಸಟೆ ನುಡಿವ ಮುದುಕರೆಂಬಂತೆ ಜನ ತೆಗಳುವರು
ನಿನ್ನ ನಿಜ ಸತ್ವವನು ‘ಆವೇಶದಲಿ ಕವಿಯು
ಹಳೆಹಾಡ ಜಗ್ಗಿ ಹಿಗ್ಗಿಸಿದ ಸ್ತುತಿ’ ಎನ್ನುವರು.
ನೀ ಉಳಿವೆ ಆಗ ನಿನ್ನದೆ ಕಂದ ಇದ್ದಲ್ಲಿ
ಎರಡೆರಡು ರೀತಿಯಲಿ, ಕಂದನಲಿ ಕವಿತೆಯಲಿ.
*****
ಮೂಲ: ವಿಲಿಯಂ ಷೇಕ್ಸ್‌ಪಿಯರ್
Sonnet 17
Who will believe my verse in time to come

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸ್ವಪ್ನ ಮಂಟಪ – ೮
Next post ಆಗಾಗ

ಸಣ್ಣ ಕತೆ

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

cheap jordans|wholesale air max|wholesale jordans|wholesale jewelry|wholesale jerseys