ದೆಸೆ ತಿರುಗಿ ಮೇಲೆದ್ದ ಜನ ತಮಗೆ ಗಿಟ್ಚಿರುವ
ಬಿರುದು ಬಾವಲಿಯನ್ನು ಕೊಚ್ಚಿಕೊಳ್ಳಲಿ ಬೀಗಿ,
ನನಗಿಲ್ಲ ಅಂಥ ಅದೃಷ್ಟ, ನನ್ನೆಲ್ಲ ಸುಖ
ಬಲು ಹಿರಿಯದೆಂದು ನಾ ಗೌರವಿಸಿದುದರಲ್ಲಿ.
ರಾಜಕೃಪೆ ದಕ್ಕಿ ವೀರರ ಕೀರ್ತಿ ಹಬ್ಬುವುದು
ರವಿಕಿರಣ ತಾಗಿ ಹೂ ಹೊನ್ನಂತೆ ಹೊಳೆವಂತೆ;
ಗೆದ್ದೆಲ್ಲ ಹೆಮ್ಮೆ ಇದ್ದಲ್ಲೆ ಪುಡಿ ಪುಡಿ, ಮುಳಿದು
ಹುಬ್ಬುಗಂಟಿಕ್ಕಲದು ಎಲ್ಲ ಕಥೆ ಮುಗಿದಂತೆ.
ದಿಟ್ಟ ಹೋರಾಟಗಳ ಸಾರಿ ಸಾವಿರ ಬಾರಿ
ಗೆದ್ದು ಯಾವಾಗಲೋ ಒಮ್ಮೆ ಬಿದ್ದರೆ ಮಲ್ಲ,
ಗೌರವದ ಶಿಖರದಿಂದುರುಳಿ ಗೋರಿಗೆ ದಾರಿ
ಹೊಳೆಯಲ್ಲಿ ಹುಣಿಸೆ ತೊಳೆದಂತೆ ಹಿಂದಿನದೆಲ್ಲ.
ನಾನೆ ಸುಖಿ ಕೊಟ್ಟು ಪಡೆದಿರುವೆ ಪ್ರೀತಿಯನೆಲ್ಲ,
ತೊರೆಯುವವನಲ್ಲ, ತೊರೆಯುವರೆಂಬ ಭಯವಿಲ್ಲ.
*****
ಮೂಲ: ವಿಲಿಯಂ ಷೇಕ್ಸ್ಪಿಯರ್
Sonnet 25
Let those who are in favour with their stars
Related Post
ಸಣ್ಣ ಕತೆ
-
ಕ್ಷಮೆ
ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…
-
ಎರಡು ಮದುವೆಗಳು
ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…
-
ತೊಳೆದ ಮುತ್ತು
ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…
-
ನಂಟಿನ ಕೊನೆಯ ಬಲ್ಲವರಾರು?
ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…
-
ದಾರಿ ಯಾವುದಯ್ಯಾ?
ಮೂವತೈದು ವರ್ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…