ಅಮೃತಶಿಲೆಯಲಿ ಕಡೆದ ಚಿನ್ನಲೇಪನವಿರುವ
ರಾಜಸ್ಮಾರಕ ಮೀರಿ ಬಾಳುವುದು ಈ ಕಾವ್ಯ,
ಕಾಲದ ಹೊಲಸು ಪಾಚಿ ಮೆತ್ತಿರುವ ಸ್ಮಾರಕವ
ಮೂದಲಿಸಿ ಹೊಳೆವೆ ನೀ ಕವಿತೆಯಲಿ ಬಲುಭವ್ಯ
ಯುದ್ಧದಲಿ ಎಲ್ಲ ವಿಗ್ರಹ ಮಣ್ಣಿಗುರುಳುವುವು,
ಬುಡಮೇಲು ಮಾಡುವುವು ಭವ್ಯ ಕಟ್ಟಡಗಳನು
ದೊಂಬಿಗಳು. ರಣಚಂಡಿ ಖಡ್ಗ ರಣಜ್ವಾಲೆಗಳು
ಅಳಿಸವೀ ಸ್ಮೃತಿಯ ಜೀವಂತ ದಾಖಲೆಯನ್ನು.
ಸಾವನ್ನು, ಸ್ಮೃತಿಯನೊರೆಸುವ ಶತ್ರುವೆಲ್ಲವನು,
ಸೆಣಸುತ್ತ ಗೆದ್ದು ಸಾಗುವೆ ನೀನು ಕಡೆತನಕ,
ಬರಲಿರುವ ಜನರ ಕಣ್ಣಲ್ಲಿ ನಿನ್ನ ಯಶಸ್ಸು
ಹೊಳೆಯುತಿರುವುದು, ಲೋಕ ಪ್ರಳಯ ಕಾಣುವ ತನಕ.
ದೈವನಿರ್ಣಯದ ದಿನ ಮೇಲಕೇಳುವವರೆಗೆ,
ಇರುವೆ ಈ ಕವಿತೆಯಲಿ, ಪ್ರೇಮಿಗಳ ಕಣ್ಣೊಳಗೆ.
*****
ಮೂಲ: ವಿಲಿಯಂ ಷೇಕ್ಸ್ಪಿಯರ್
Sonnet 55
Not marble, nor the gilded monuments
Related Post
ಸಣ್ಣ ಕತೆ
-
ಕರೀಮನ ಪಿಟೀಲು
ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…
-
ಇರುವುದೆಲ್ಲವ ಬಿಟ್ಟು
ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…
-
ಕಳ್ಳನ ಹೃದಯಸ್ಪಂದನ
ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…
-
ಮತ್ತೆ ಬಂದ ವಸಂತ
ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…
-
ಗೋಪಿ
ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…