ಕಲ್ಲು ಹಿತ್ತಾಳೆ ನೆಲ ಕೊನೆಯಿರದ ಕಡಲ ಜಲ
ಎಲ್ಲದರ ಬಲ ಮೀರಿ ಆಳುತ್ತಿರಲು ಸಾವು
ಹೂವಿಗೂ ಹೆಚ್ಚು ಕೋಮಲವೆನ್ನಿಸುವ ವಿರಳ
ಚೆಲುವು ತಡೆದೀತೇನು ಅದರ ಆಕ್ರೋಶವನು ?
ದುರ್ಭೇದ್ಯ ಶಿಲೆಗೆ, ಉಕ್ಕಿನ ದ್ವಾರಗಳ ಧೃತಿಗೆ
ಕಾಲ ಮಣಿಯುವ ಬದಲು ಅವುಗಳೇ ಸಮೆದಿರಲು,
ಅವಶೇಷಭರಿತ ಕಾಲದ ಬಡಿಗೆಯೇಟಿಗೆ
ಬೇಸಿಗೆ ವಸಂತಸಿರಿ ಹೇಗೆ ಎದೆಯೊಡ್ಡುವುದು ?
ಎಂಥ ಭೀಕರ ಚಿಂತೆ, ಅಯ್ಯೋ ಬಟ್ಚಿಡಲೆಲ್ಲಿ
ಕಾಲ ಸಂಪುಟದಿಂದ ಮಣಿ ರತ್ನ ಪದಕವನು ?
ಅವನ ಮಿಂಚಿನ ಹೆಜ್ಜೆ ಹಿಂದೆಳೆವ ಕೈಯೆಲ್ಲಿ ?
ಚೆಲುವಿನೀ ಸುಲಿಗೆ ತಡೆಯುವ ಧೀರ ಯಾರವನು ?
ಇಲ್ಲ ಯಾರೂ ಇದು ಪವಾಡವೊಂದಕೆ ಸಾಧ್ಯ,
ಕಪ್ಪು ಮಸಿಯೊಳು ಜ್ವಲಿಸಬಹುದು ಒಲವಿದು ನಿತ್ಯ.
*****
ಮೂಲ: ವಿಲಿಯಂ ಷೇಕ್ಸ್ಪಿಯರ್
Sonnet 65
Since brass nor stone, nor earth, nor boundless sea
Related Post
ಸಣ್ಣ ಕತೆ
-
ದೇವರು
ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…
-
ರಾಮಿ
‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…
-
ಇರುವುದೆಲ್ಲವ ಬಿಟ್ಟು
ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…
-
ಕ್ಷಮೆ
ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…
-
ಕತೆಗಾಗಿ ಜತೆ
ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…