ಲೋಕದ ಕಣ್ಣು ತಿಳಿವ ನಿನ್ನ ವ್ಯಕ್ತಿತ್ವದಲಿ

ತಿದ್ದಬೇಕಾದ ಕೊರತೆಯೆ ಇಲ್ಲ, ಈ ಮಾತೆ
ಶತ್ರುಗಳು ಕೂಡ ಮೆಚ್ಚುವ ಸತ್ಯವಾಗಿರುತ
ಜನದ ಮನದಿಂದೆದ್ದ ನುಡಿಯೊಳೂ ಮೂಡಿದೆ.
ನಿನ್ನ ಹೊರ ಚೆಲುವು ಮೆಚ್ಚಿಗೆ ಮಕುಟ ಗಳಿಸಿದೆ,
ಮೆಚ್ಚಿ ನುಡಿಯುವ ನಾಲಿಗೆಗಳೆ ಕಣ್ಣಿಗೆ ಸಿಗುವ
ನೋಟದಾಚೆಗು ಸಾಗಿ ಮತ್ತೇನೊ ಗ್ರಹಿಸಿವೆ
ಸ್ತುತಿಗೆ ಬೆರೆಸಿವೆ ಬೇರೆಯೇನೋ ಅಪಸ್ವರವ.
ನಿನ್ನ ಚಿತ್ತದ ಚೆಲುವನ್ನವರು ಕಾಣುವರು,
ನಿನ್ನ ಕೃತಿ ನೋಡಿ ಆ ಚೆಲುವ ತರ್ಕಿಸುವರು;
ಕಣ್ಣೊಳಗೆ ಪ್ರೀತಿಯಿದ್ದರು ಕೂಡ ಗಾಂಪರು
ಹೂವ ಚೆಲುವಿಗೆ ಕಸದ ನಾತವನು ಬೆರಸುವರು.
ನಿನ್ನ ರೂಪಕ್ಕೆ ಜೊತೆಗೊಡುವ ಕಂಪೇಕಿಲ್ಲ ?
ಇಷ್ಟೆ ಕಾರಣ, ನೀ ಅಸಾಮಾನ್ಯನಾಗಿಲ್ಲ.
*****
ಮೂಲ: ವಿಲಿಯಂ ಷೇಕ್ಸ್‌ಪಿಯರ್
Sonnet 69
Those parts of thee that the world’s eye doth view

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಉತ್ತರಣ – ೧೩
Next post ತಡೆರಹಿತ ಬಸ್

ಸಣ್ಣ ಕತೆ

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

cheap jordans|wholesale air max|wholesale jordans|wholesale jewelry|wholesale jerseys