ಸಾಧುಗಳಿಗಿದೆ ಸಾಧನವೋ ಸುಜ್ಞಾನವೋ

ಸಾಧುಗಳಿಗಿದೆ ಸಾಧನವೋ ಸುಜ್ಞಾನವೋ         ||ಪ||

ಪದುಮ ದಳದ ಮದವು ಬೆಳೆದು
ಸದಮಲಾತ್ಮಯೋಗ ತುದಿಯ-
ಲದನುಯೇರಿ ಮೆರೀದು ಬೆರಿದು
ಕದಲದಂತೆ ಕರುಣ ರಸದ                           ||೧||

ಚಂದ್ರ ಸೂರ್ಯರೊಂದುಗೂಡಿದಾ ಅಲ್ಲೆ ಮೂಡಿದಾ
ರಂಧ್ರದೂಳಗೆ ಹೊಳೆವ ಮಿಂಚು
ಒಂದೇ ದೃಷ್ಟಿಯಿಂದ ನೋಡಿ
ಸಿಂಧುಶುಚಿನಾಥ ತಿಳಿದು ಬಿಂದುವಸ್ತು ಸವಿದು ಪರಮ  ||೨||

ಭೂತ ಪಂಚಕವನಳಿದು ತೋರುವಾ
ಸಂಪ್ರೀತಿಯಿಂದ ಮಾತು ಮಾತಿಗೆ ಮೋಜುಗಾಣುವಾ
ಧಾತ ಪರಬ್ರಹ್ಮನೇ ಈತನೆಂದು
ಅರಿತು ಪವನಜಾಗದೊಳಗೆ ಜನ್ಮರೀತಿ
ಕೌತುಕದಿ ಕುಳಿತು ಮೆರೆವ                                ||೩||

ತಾಗುಬಾಗುವೆಲ್ಲ ಕಳಿದನು ಅಲ್ಲಿಳಿದನು
ಯೋಗ ಸಾಧನವನ್ನು ಮಾಡಿ
ಭೋಗ ವಿಷಯ ಕೂಗೆದೂಡಿ
ರಾಗದಿಂದ ರಜದ ಕೊನೆಯ
ಮೇಲೆ ನಿಂತು ಚಂದ್ರ ಜ್ಯೋತಿ                           ||೪||

ಚಾಗು ಸದಾನಂದಜಲದೊಳು ಬೋಧಾ
ಅಗಲತೆಯನೇಕ ಮಂತ್ರ ಮೂಲಕಲೆಗಳಾ
ಏಕನಾಥ ಶಿಶುನಾಳಧೀಶನಲ್ಲಿ ತಾಕಿ ತಾಕಿ
ಜೋಕಿಯಿಂದ ಜನನ ಮರಣ ನೂಕಿ ನಿಲುವಂಥ         ||೫||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶಿವಲೋಕದಿಂದ ಒಬ್ಬ ಸಾಧು ಬಂದಾನು
Next post ಸಾಧುಗಳೆಲ್ಲಾ ಚನ್ನಾಗಿ ಕೇಳಿರಣ್ಣಾ

ಸಣ್ಣ ಕತೆ

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

cheap jordans|wholesale air max|wholesale jordans|wholesale jewelry|wholesale jerseys