ಹಿಂದೂಮುಸಲ್ಮಾನರ ಐಕ್ಯ – ೪

ಹಿಂದೂಮುಸಲ್ಮಾನರ ಐಕ್ಯ – ೪

ಎಷ್ಟೋ ವರ್ಷಗಳು ಕಳೆದವು. ಶಿವದಾಸನು ಮೃತ್ಯು ಶಯ್ಯೆಯಲ್ಲಿ ಪವಡಿಸಿದ್ದನು. ಅವಸಾನ ಕಾಲಕ್ಕೆ ಅವನು ಗುಲಾಮ ಆಲಿಯನ್ನು ಕರೆಸಿಕೊಂಡು ಮಾಯೆಯ ಕೈಯನ್ನು ಅವನ ಕೈಯಲ್ಲಿತ್ತು, ಗದ್ಗದ ಕಂಠದಿಂದ ಏನೋ ಹೇಳಬೇಕೆಂದನು; ಆದರೆ ಅಷ್ಟರಲ್ಲಿ ಅವನ ವಾಣಿಯೇ ಕುಂಠಿತವಾಗಲು, ಸಾಶನಯನದಿಂದ ಅವರೀರ್ವವರ ಕಡೆಗೆ ನೋಡಹತ್ತಿದನು.

ಸಹೃದಯನಾದ ಗುಲಾಮ ಆಲಿಗೆ ಭ್ರಾತೃಸಮಾನನಾದ ಶಿವದಾಸನ ಆಂತರ್ಭಾವ ತಿಳಿದು ಬಂದಿತು. ಆಗ ಅವನು :- “ಬ್ರಾಹ್ಮಣಶ್ರೇಷ್ಠಾ, ಮಾಯೆಯ ಮಾಯೆಯನ್ನು ಪರಿತ್ಯಜಿಸಿ, ಇಷ್ಟದೇವತೆಯನ್ನು ಸ್ಮರಿಸುವವನಾಗು. ಮಾಯೆಯು ಈಗ ಮನುಷ್ಯಳಾಗಿ ಉಳಿದಿರುವದಿಲ್ಲ. ಅವಳು ನನ್ನ ಪರಮ ದೇವತೆಯಾಗಿರುತ್ತಾಳೆ. ನಾನು ಅವಳನ್ನು ರಕ್ಷಣೆಮಾಡುವೆನೆನ್ನುವದಕ್ಕಿಂತ, ಅವಳೇ ನನ್ನಂಥ ಸಾವಿರಾರು ಗುಲಾಮರನ್ನು ರಕ್ಷಿಸಲು ಸಮರ್ಥಳಾಗಿರುತ್ತಾಳೆ.”

ಮುಸಲ್ಮಾನನ ಈ ವಚನಗಳನ್ನು ಕೇಳಿ, ಶಿವದಾಸನ ಅಂತರಂಗ ದೊಳಗಿನ ಮಾಯೆಯ ವಿಷಯದ ವಾಯುಯು ಕಡಿಯಲು, ಅವನ ಕಣ್ಣೊಳಗಿಂದ ಮಾಯಾಮುಕ್ತಿ ಪ್ರದವಾದ ಆನಂದಬಾಷ್ಪಗಳು ಸುರಿದವು. ಪರ ಕ್ಷಣದಲ್ಲಿಯೇ ಶಿವದಾಸನ ಇಹ ಪರ್ಯವಸಾನವಾಯಿತು. ಶಿವದಾಸನು ಉಲ್ಲಸಿತ ಮೊಗದಿಂದ ಪ್ರಾವಣ ಮಾಡುವಾಗ ಗುಲಾಮ ಆಲಿಯು ಗದ್ದದ ಕಂಠದಿಂದ:- “ಬಾಹ್ಮಣಶ್ರೇಷ್ಠರೇ, ನಡೆಯಿರಿ – ನಡೆಯುರಿನ್ನು ಸ್ವರ್ಗಕ್ಕೆ, ಪರಕ್ಷಣದಲ್ಲಿ ಸ್ವರ್ಗಸುಖಗಳಲ್ಲಿ ನಿರತರಾಗುವ ನೀವು, ನಿಮ್ಮೀ ಗುಲಾಮನನ್ನು ಶೀಘ್ರವಾಗಿ ನಿಮ್ಮೆಡೆಗೆ ಬರಮಾಡಿಕೊಳ್ಳಲಿಕ್ಕೆ ಮರಯಬೇಡಿರಿ” ಎಂದು ಪ್ರಾರ್ಥಿಸಿದನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಲ್ಲಿ ಹುಡುಕಲಿ
Next post ತಳಮಳ

ಸಣ್ಣ ಕತೆ

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

cheap jordans|wholesale air max|wholesale jordans|wholesale jewelry|wholesale jerseys