ಮೈಸೂರು ಮಕ್ಕಳು

ನಿಮ್ಮ ನಾಡಾವುದು ?
ಮೈಸೂರು.
ನಿಮ್ಮೂರದಾವುದು ?
ಮೈಸೂರು.
ಕನ್ನಡದ ಕಣ್ಣದು,
ಮೈಸೂರು.
ನಾಲುಮಡಿ ಕೃಷ್ಣನ
ಮೈಸೂರು.

ಅಲ್ಲೆಲ್ಲಿ ನೋಡಿದರು ಬಾನ ಕರೆಯಲಿ ಹದುಗಿ ಕಾರ ಮುಗಿಲಂತಿಹುವು ಬೆಟ್ಟ ಹಬ್ಬಿ ;
ತೆರೆ ಎದ್ದು ಬಿದ್ದು ಬಹ ಬಯಲಲ್ಲಿ ಹಳ್ಳಿಗಳು, ತಾವರೆಯಕೆರೆ, ತೋಟ ಹೊಲದ ಹಸುರು;
ಕಾಡಿನಲಿ ನುಸಿಯುತ್ತ, ಕಲ್ಲಿನಲ್ಲಿ ಮೊರೆಯುತ್ತ, ಮರಳಿನಲ್ಲಿ ಸುಳಿಸುಳಿದು, ಸರಿಯ ದುಮುಕಿ,
ಪಯಿರುಗಳ ಬದುಕಾಗಿ, ಹೊಳಲುಗಳ ಬೆಳಕಾಗಿ, ಕಣ್ಣುಗಳ ಬೆರಗಾಗಿ ಹರಿವ ಹೊನಲು.
ಅಲ್ಲಿ ಅಲೆಯಲೆಯಾಗಿ ಬಂದು, ನೆಲೆನೆಲೆಯಾಗಿ ನಿಂದು, ಹಲತೆರದಿಂದ ನುಡಿದು, ನಡೆದು,
ಕಡೆಗೆ ನಾಡೊಂದೆಂದು, ದೊರೆಯೊಬ್ಬ ನಮಗೆಂದು, ಬಾಳ ಬೆಲೆ ಹುದುವೆಂದು ಕಲಿತು, ಕಲೆತು,
ಜಾಣಿನಲಿ, ಚೆಲುವಿನಲಿ, ಸೊಗಸಿನಲಿ, ನಯದಲೌದಾರ್‍ಯದಲಿ, ಕಾರ್‍ಯದಲಿ ಕಳಶವೆನಿಸಿ,
ಮೆರೆಯುತಿಹ ಜನವ ನಾನೇನೆಂಬೆ, ಎಂತು ನಾ ಕನ್ನಡಿಗರೈಸಿರಿಯ ಬಣ್ಣಿಸುವೆನು.

ಚಿನ್ನದ ನಾಡದು,
ಮೈಸೂರು,
ಗಂಧದ ಗುಡಿಯದು,
ಮೈಸೂರು,
ವೀಣೆಯ ಬೆಡಗದು,
ಮೈಸೂರು,
ನಾಲುಮಡಿ ಕೃಷ್ಣನ
ಮೈಸೂರು,

ಅಲ್ಲೊಬ್ಬ ನಮಗಿಹನು ನಾಯಕನು ; ಭಕ್ತಿಯಲಿ ನಿಲುಸಿಲುಕಿ ಕುಣ್ತುಂಬ ನೋಡುತಿರಲು,
ಆನೆಯಂಬಾರಿಯಲಿ ನಸುನಗೆಯನಿಕ್ಕೆಲಕೆ ಬೀರಿ, ಜನರಕ್ಕರೆಯನುಕ್ಕಿಸುವನು.
ಧೀರನಾತನು ; ತುಂಬುಗಾಂಭೀರ್‍ಯದಲಿ ಸತ್ಯವನೆ ಎತ್ತಿ ನಿಲಿಸುವನು ಪ್ರಜೆಯ ತಂದೆ ;
ಮರೆತು ತನ್ನನು ರಾಜ್ಯ ಸೇವೆಯಲಿ, ಸಲಿಸುವನು ಧರ್‍ಮವನು ರಾಜರ್ಷಿ ಕರ್‍ಮಯೋಗಿ.
ಬನ್ನಿ ಕೆಳೆಯರ, ನಮ್ಮ ಬಾಳಿಕೆಯ ಕಾಣಿಕೆಯನೊಪ್ಪಿಸುವ, ಕೈಕೊಳುವ ದೊರೆಯ ಗುರಿಯ ;
ನೋಹಿಯಾತನದು-ತನ್ನರ ಮನೆಯ ಹಸಗೆಯ್ದು ಬೆಳಗಿದಂತೆಯೆ, ಬೆಳಗಿ ಊರ, ನಾಡ,
ಹಸಗೆಯ್ವೆ, ಹೊಸಗೆಯ್ವೆನೆಂಬೊಲುಮೆ ; ನಾವೆಲ್ಲರಾ ನಾಯಕನ ದಳದಿ ದೀಕ್ಷೆ ಪಡೆದು,
ಮೀರಿ ಬಳಸುವ ಬನ್ನಿ ಬುದ್ಧಿಯನು ಶ್ರದ್ಧೆಯನು ಕನ್ನಡಿಗರೈಸಿರಿಯ ಬೆಳೆಯ ಬೆಳಸಿ.

ಬೆಳೆಯುವ ನಾಡದು,
ಮೈಸೂರು.
ಇಳೆಯ ಮಾದರಿಯದು
ಮೈಸೂರು.
ಕನ್ನಡಿಗನುಸಿರದು,
ಮೈಸೂರು.
ನಾಲುಮಡಿ ಕೃಷ್ಣನ
ಮೈಸೂರು,
*****
೧೯೨೦

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಿನ್ನ ಹೆಸರು
Next post ದಾವಣಗೆರೆ ಜಿಲ್ಲೆಯ ಕಥಾಸಾಹಿತ್ಯ

ಸಣ್ಣ ಕತೆ

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

cheap jordans|wholesale air max|wholesale jordans|wholesale jewelry|wholesale jerseys