ಕನ್ನಡ ಹೆಣ್ಣು

ಮೊದಲು ತಾಯ ಹಾಲ ಕುಡಿದು,
ಲಲ್ಲೆಯಿಂದ ತೊದಲಿ ನುಡಿದು,
ಕೆಳೆಯರೊಡನೆ ಬೆಳೆದು ಬಂದ
ಮಾತದಾವುದು-
ನಲ್ಲೆಯೊಲವ ತೆರೆದು ತಂದ
ಮಾತದಾವುದು-

ಸವಿಯ ಹಾಡ, ಕತೆಯ, ಕಟ್ಟಿ,
ಕಿವಿಯಲೆರೆದು, ಕರುಳ ತಟ್ಟಿ,
ನಮ್ಮ ಜನರು, ನಮ್ಮ ನಾಡು,
ಎನಿಸಿತಾವುದು-
ನಮ್ಮ ಕವಿಗಳೆಂಬ ಕೋಡು
ತಲೆಗದಾವುದು-

ಕನ್ನಡನುಡಿ, ನಮ್ಮ ಹೆಣ್ಣು,
ನಮ್ಮ ತೋಟದಿನಿಯ ಹಣ್ಣು ;
ಬಳಿಕ, ಬೇರೆ ಬೆಳೆದ ಹೆಣ್ಣು
ಬಳಿಗೆ ಸುಳಿದಳು ;
ಹೊಸದು ರಸದ ಬಳ್ಳಿ ಹಣ್ಣು
ಒಳಗೆ ಸುಳಿದಳು.

ಪಡುವ ಕಡಲ ಹೊನ್ನ ಹೆಣ್ಣು,
ನನ್ನ ಜೀವದುಸಿರು, ಕಣ್ಣು,
ನಲಿಸಿ, ಕಲಿಸಿ, ಮನವನೊಲಿಸಿ
ಕುಣಿಸುತಿರುವಳು ;
ಒಮ್ಮೆ ಇವಳು, ಒಮ್ಮೆ ಅವಳು,
ಕುಣಿಸುತಿರುವಳು.

ಹೀಗೆ ನನಗೆ ಹಬ್ಬವಾಗಿ,
ಇನಿಯರಿಬ್ಬರನ್ನು ತೂಗಿ,
ಇವಳ ಸೊಬಗನವಳು ತೊಟ್ಟು,
ನೋಡಬಯಸಿದೆ ;
ಅವಳ ತೊಡಿಗೆ ಇವಳಿಗಿಟ್ಟು
ಹಾಡ ಬಯಸಿದೆ.

ಬಲ್ಲವರಿಗೆ ಬೆರಗೆ ಇಲ್ಲಿ ?
ಅರಿಯದವರು ನಾಲ್ವರಲ್ಲಿ
ಕಳೆಯ ಬೆಳಕು ಹೊಳೆಯಲಂದು
ದಣಿದುಹೋದೆನು.
ಬಡವನಳಿಲುಸೇವೆಯೆಂದು
ಧನ್ಯನಾದೆನು.
*****
೧೯೨೧

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾಣದ ಕೈಯೆಂದು
Next post ಡಿ.ಆರ್. ನಾಗರಾಜ್ ಅವರ ‘ಅಮೃತ ಮತ್ತು ಗರುಡ’ : ಒಂದು ಮರುಚಿಂತನೆ

ಸಣ್ಣ ಕತೆ

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

cheap jordans|wholesale air max|wholesale jordans|wholesale jewelry|wholesale jerseys