ಅರಮನೆಯ ಒಸಗೆ

ಮಂಗಳಂ, ಮೈಸೂರಿನರಮನೆಗೆ ಮಂಗಳಂ.
ಜಯದ ಹೆಸರಿನ ಚಾಮರಾಜಂಗೆ ಮಂಗಳಂ.
ಮುಮ್ಮಡಿಯ, ನಾಲ್ಮಡಿಯ ದಿವ್ಯ ತೇಜಂಗಳಂ
ಒಮ್ಮುಡಿಯೊಳಾಂತೆಸೆವ ಧೀರಂಗೆ ಮಂಗಳಂ.
ತಂದೆತಾಯ್ ಪಯಿರಿಟ್ಟ ಪುಣ್ಯದ ಫಲಂಗಳೇ,
ಸೋದರನ ಸೌಭಾಗ್ಯದಮೃತ ಕಳಶಂಗಳೇ,
ಲಾವಣ್ಯ ಲಕ್ಷ್ಮಿಯರನಾಳ್ವ ಜಯಲಕ್ಷ್ಮಿಯರೆ,
ರಾಜರೊಲ್ಮೆಯ ಚೆಲ್ವಿ ನೊಡತಿಯರೆ, ಮಂಗಳಂ.
ನಿಮಗಿರಲಿ ನಲಿದಾಡಿ ನಿತ್ಯ ಶುಭಮಂಗಳಂ ;
ದೇವರೀಯಲಿ ಮೆಚ್ಚಿ ನಿತ್ಯೋತ್ಸವಂಗಳಂ.
ಮನೆ ಬೆಳಗಿ, ಸಿರಿ ಬೆಳಗಿ, ಮಕ್ಕಳೈಸಿರಿ ಬೆಳಗಿ,
ಭರತವರ್ಷದ ನುಡಿಯ ಸಾಲಿನಲ್ಲಿ ಮೇಲ್ ಬೆಳಗಿ,
ಸವಿಯುತಿರಿ ನಾಡೆಲ್ಲ ಹರಸುವ ಸುಖಂಗಳಂ.
ಮಂಗಳಂ : ಕನ್ನಡದ ದೊರೆತನಕೆ ಮಂಗಳಂ.
*****
೧೯೪೧

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸೂರ್ಯ ಅಪೂರ್ಣ
Next post ಬಂಡಾಯ ಸಂವೇದನೆ : ಚರಿತ್ರೆಯ ನಡಿಗೆ

ಸಣ್ಣ ಕತೆ

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

cheap jordans|wholesale air max|wholesale jordans|wholesale jewelry|wholesale jerseys