ಧರ್ಮಯುದ್ದ

(ಮಯಿ ಸಂನ್ಯಸ್ಯ ಯುದ್ಧ್ಯಸ್ವ)

ಮಂಗಳಂಗಳನಿಳೆಯ ಸರ್‍ವ ಜ
ನಂಗಳಿಗೆ ನಲಿದೀವ ನಿತ್ಯನೆ,
ಮಂಗಳಾತ್ಮನೆ, ಕೃಪೆಯ, ಮುಕ್ತರ ಬೀಡೆ, ಕಾಪಾಡು.
ಕಂಗೆಡುವ ಮದದುಬ್ಬಿನಲಿ ರಣ
ದಂಗಣದ ಕಾಳ್ಗಿಚ್ಚನೆಬ್ಬಿಸಿ
ಭಂಗಪಡುವ ದುರಾಸೆಯಡಗಿಸಿ ನಡಸು ಮಕ್ಕಳನು.

ಹಿಂದೆ ಅಸುರರು ಕೊಬ್ಬಿ, ಸುರನರ
ರಂದಬಾಳನು ಮೆಟ್ಟಿ, ಹಿಂಸಾ
ನಂದ ಯೋಗಿಗಳಾಗಿ ಭೂಮಿಗೆ ಭಾರವೆನಿಸಿರಲು,
ತಂದೆ, ನೀ ಮಾಧವನುಮಾಧವ
ನೆಂದು ಪರಿಪರಿ ಪೊಗಳೆ, ಕರಗಿದೆ,
ನೊಂದೆ, ಬಿಡಿಸಿದೆ ಲೋಕಕಂಟಕರಿಂದ ಭಕ್ತರನು.

ಯುದ್ಧವೆಂಬ ಪಿಶಾಚ ಯಜ್ಞಕೆ
ಬದ್ಧರಹ ರಾಕ್ಷಸರ ಸಾಹಸ
ಬುದ್ದಿ ಕೌಶಲವೇಕೆ? ಐಸಿರಿಯೇಕೆ? ಬಿಸುಡು, ಸುಡು!
ಯುದ್ಧವೇ ತಂದೊಡ್ಡೆ, ಯುದ್ಧವ
ಯುದ್ಧದಿಂದಲೆ ಯಜ್ಞಮಾಡುವ
ಸಿದ್ದಿಯನು ನೀ, ದೇವ, ಬೆಸಸಿದೆ ಜಗವನುದ್ಧರಿಸೆ.

ಬೇಡುವೆವು, ಬಾ, ಸುಜನಪಾಲಕ.
ಹೂಡು ಧರ್‍ಮವ, ಧರ್‍ಮರಕ್ಷಕ,
ನಾಡ ಕಾವಲ ದಳಕೆ ಕೂಡಲಿ ನಾಡ ಬಲವೆಲ್ಲಾ.
ಓಡಿಹೋಗಲಿ ಭಯದ ನುಡಿಗಳು,
ಮೂಡಿ ತೂಗಲಿ ನಗುತ ಬೆಳೆಗಳು,
ನೀಡು ದಯವನು ದಣಿಗೆ, ನೆಮ್ಮದಿ ಬದುಕ ಬಡವನಿಗೆ.

ಕೆಣಕಿದರೆ ಬಿಡದೆತ್ತಿಕೊಂಡೆವು-
ಮಣಿವೆವೇ ನಾವಿನ್ನು ? ಕಾಳಗ
ದಣಿಗೆ ಮುಡಿಪಾಗಿಟ್ಟು ತನುಮನಧನವ ತೇಯುವೆವು!
ಋಣವಿದಲ್ಲವೆ ಭರತಮಾತೆಯ?
ಋಣವಿದಲ್ಲವೆ ದೇವಪಿತೃ‌ಋಷಿ
ಗಣದ ? ಮಡಿದಾ ಸತ್ಯಧರ್ಮ ಸ್ವತಂತ್ರ ಸಾಧಕರ ?

ಗೆದ್ದು ಬಿಟ್ಟೆವು! ಹುಬ್ಬ ಹಾರಿಸಿ-
ಮದ್ದು ಗುಂಡನು ಸುರಿಸಿ, ಹೊಸ ಹುಸಿ
ಸುದ್ದಿಗಳ ತೂರಾಡಿ, ನಂಬಿಸಿ, ಕೆಂಡಮಳೆಗರೆದು,
ಬಿದ್ದು ಹೆಣ್ಗಳ ಮೇಲೆ, ಹಸುಳೆಯ
ಗುದ್ದಿ, ದಾಸ್ಯವ ಹೊರಿಸಿ-ನಲಿವಿರ
ಗೆದ್ದು ಬಿಟ್ಟೆವು! ಎನುತ?-ಗೆಲುವಿರ ನೀವು ದೇವರನು!

ಗೆಲವು ನಮ್ಮದು, ಮಾಯಕಾರರೆ!
ಗೆಲವು ನಮ್ಮದು, ದ್ರೋಹಿಗಳೆ! ಕಡೆ
ಗೆಲವು ನಮ್ಮದು, ನಮ್ಮ ದಿವ್ಯ ಜ್ಯೋತಿ ನಮಗಿಹನು;
ಗೆಲವು ಶ್ರೀ ಜಯಚಾಮರಾಜಗೆ!
ಗೆಲವು ಬಿಡುತೆಗೆ, ಸಾಧು ಜನತೆಗೆ,
ಗೆಲವು ಶಾಂತಿಯ ಸರ್ವಸಮತೆಯ ಸುಖದ ಜೀವನಕೆ!

ಮಂಗಳಂಗಳನಿಳೆಯ ಸರ್‍ವ ಜ
ನಂಗಳಿಗೆ ನಲಿದೀವ ನಿತ್ಯನೆ,
ಮಂಗಳಾತ್ಮನೆ, ಒಲವೆ, ಮುಕ್ತರ ನಲಿವೆ, ಕಾಪಾಡು.
ಕಂಗೆಡುವ ಮದದುಬ್ಬಿನಲಿ ರಣ
ದಂಗಣದ ಕಾಳ್ಕಿಚ್ಚನೆಬ್ಬಿಸಿ
ಭಂಗಪಡುವ ದುರಾಸೆಯನ್ನು ಮುರಿ, ಗೆಲಿಸು ಶಾಂತಿಯನು.

ಓಂ ಶಾಂತಿಶ್ಶಾಂತಿ ಶಾಂತಿಃ
*****
೧೯೪೩

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆರುಣಿಯ ನೋಡಿದಿರಾ
Next post ಬಂಡಾಯ : ಯಾಕೆ ಜೀವಂತ?

ಸಣ್ಣ ಕತೆ

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

cheap jordans|wholesale air max|wholesale jordans|wholesale jewelry|wholesale jerseys